ಡಿ.ಕೆ ಶಿವಕುಮಾರ್ 
ರಾಜಕೀಯ

ಕುಮಾರಸ್ವಾಮಿ-ಜಮೀರ್ ಸಂಬಂಧ ಗಳಸ್ಯ-ಕಂಠಸ್ಯ, ಅವರಿಬ್ಬರು ಹಳೇ ದೋಸ್ತಿಗಳು; ಬಿಜೆಪಿಯಿಂದ ಅನಗತ್ಯ ರಾಜಕೀಯ- DCM

ನನಗೆ ಆತ್ಮೀಯರಾಗಿರುವ ಅಲ್ಪಸಂಖ್ಯಾತ ಸಮುದಾಯದವರನ್ನು ಸಾಬ್ರೆ ಎಂದು ಕರೆಯುತ್ತೇವೆ. ಕೆಲವರನ್ನು ಗೌಡ ಎಂದು ಕರೆಯುತ್ತೇವೆ. ಇದು ಪ್ರೀತಿ ವಿಶ್ವಾಸದಲ್ಲಿ ನಡೆಯುವ ಸಂಭಾಷಣೆ.

ಬೆಂಗಳೂರು: ಕುಮಾರಸ್ವಾಮಿ-ಜಮೀರ್ ಅವರ ಸಂಬಂಧ ಗಳಸ್ಯ-ಕಂಠಸ್ಯ ರೀತಿಯದು. ಅವರ ನಡುವಣ ಮಾತುಕತೆ ಅವರ ವೈಯಕ್ತಿಕ ವಿಚಾರ. ಅದರಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರಿಬ್ಬರ ನಡುವೆ ಹಳೆಯ ಸ್ನೇಹ ಇದೆ. ಜಮೀರ್ ಅವರು ಕುಮಾರಸ್ವಾಮಿ ಯಾವ ಚಡ್ಡಿ ಹಾಕಿದ್ದಾರೆ ನೋಡಿದ್ದೇನೆ ಎನ್ನುತ್ತಾರೆ. ಕುಮಾರಸ್ವಾಮಿ ಕೂಡ ಜಮೀರ್ ಅವರ ಬಗ್ಗೆ ನನಗೆ ಗೊತ್ತು ಎನ್ನುತ್ತಾರೆ. ಜಮೀರ್ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಾ? ಅವರ ನಡುವೆ ಸ್ನೇಹದಲ್ಲಿ ಹಿಂದೆಂದೂ ಇಂತಹ ಮಾತು ಬಂದಿಲ್ಲವಾದರೆ ಕುಮಾರಸ್ವಾಮಿ ಅವರು ಜಮೀರ್ ವಿರುದ್ಧ ಜನಾಂಗೀಯ ನಿಂದನೆ ದೂರು ನೀಡಲಿ ಎಂದರು. ಜಮೀರ್ ಹೇಳಿಕೆಯನ್ನು ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ಅವರಿಬ್ಬರ ನಡುವಣ ವೈಯಕ್ತಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದು ಬೇಡ. ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಇದ್ಯಾವುದೂ ಲೆಕ್ಕಕ್ಕೆ ಬರುವುದಿಲ್ಲ. ಇವರು ಅವರಿಗೆ ಡ್ರೈವರ್ ಆಗಿದ್ದರೋ, ಓನರ್ ಕೆಲಸ ಮಾಡಿದ್ದರೋ ಅವರಿಬ್ಬರಿಗೆ ಗೊತ್ತು. ನನಗೆ ಆತ್ಮೀಯರಾಗಿರುವ ಅಲ್ಪಸಂಖ್ಯಾತ ಸಮುದಾಯದವರನ್ನು ಸಾಬ್ರೆ ಎಂದು ಕರೆಯುತ್ತೇವೆ. ಕೆಲವರನ್ನು ಗೌಡ ಎಂದು ಕರೆಯುತ್ತೇವೆ. ಇದು ಪ್ರೀತಿ ವಿಶ್ವಾಸದಲ್ಲಿ ನಡೆಯುವ ಸಂಭಾಷಣೆ. ಕುಮಾರಸ್ವಾಮಿ ಮೇಲೆ ಜಮೀರ್ ಗೆ ಪ್ರೀತಿ. ಕುಮಾರಸ್ವಾಮಿ ಕೂಡ ಪ್ರೀತಿಯಿಂದ ಇವರನ್ನು ಕುಳ್ಳ ಎಂದು ಕರೆಯುತ್ತಾರಂತೆ. ಇದರಲ್ಲಿ ರಾಜಕಾರಣ ಬೇಕೇ ಎಂದು ತಿಳಿಸಿದರು.

ಚನ್ನಪಟ್ಟಣ ಹಾಗೂ ಬೇರೆ ಎಲ್ಲೂ ಯಾವ ಪರಿಣಾಮವನ್ನೂ ಬೀರುವುದಿಲ್ಲ. ವಿರೋಧ ಪಕ್ಷದವರು ಸೋಲಿನ ಭಯದಿಂದ ಇದಕ್ಕೆ ಬಣ್ಣ ಹಚ್ಚಿ ಟ್ವೀಟ್ ಮಾಡುತ್ತಿದ್ದಾರೆ, ಮಾಡಿಕೊಳ್ಳಲಿ ಎಂದು ಹೇಳಿದರು. ಕಾಮಗಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್ "ಇದೆಲ್ಲವೂ ಸುಳ್ಳು. ವಿರೋಧಿಗಳು ಚುನಾವಣೆ ಸಮಯದಲ್ಲಿ ಪ್ರಚಾರ ಪಡೆಯಲು ಈ ರೀತಿ ಸುಳ್ಳು ಹಬ್ಬಿಸುತ್ತಿದ್ದಾರೆ. ಅಧಿಕಾರಿಯುತ ಸ್ಥಾನದಲ್ಲಿದ್ದುಕೊಂಡು ಹೇಳುತ್ತಿದ್ದೇನೆ, ನಮ್ಮ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆಗಳಿಲ್ಲ. ಈ ಹಿಂದೆ ಪರಿಶಿಷ್ಟ ಜಾತಿಯವರಿಗೆ ಈ ಅವಕಾಶ ನೀಡಲು ಮುಂದಾಗಿದ್ದೆವು. ಅದರ ಹೊರತಾಗಿ ಅಲ್ಪಸಂಖ್ಯಾತರು, ಮುಸಲ್ಮಾನರಿಗೆ ಈ ಮೀಸಲಾತಿ ನೀಡುವ ಚರ್ಚೆ ಇಲ್ಲ" ಎಂದು ಸ್ಪಷ್ಟನೆ ನೀಡಿದರು.

ಚುನಾವಣೆ ಸಮಯದಲ್ಲಿ ಬಿಜೆಪಿ ಇಂತಹ ಸುಳ್ಳು ಹಬ್ಬಿಸುತ್ತಿದ್ದಾರೆ. ಚುನಾವಣೆ ಸೋಲುವ ಭಯದಿಂದ ಬೆಳ್ಳಿ ಬಟ್ಟಲು, ದೇವರ ಫೋಟೊ, ಹರಿಷಿನ ಕುಂಕುಮ, ಹಣ ಹಂಚಿ ಚುನಾವಣೆ ಮಾಡುತ್ತಿದ್ದಾರೆ. ಅವರು ಮಾತನಾಡುತ್ತಿರುವುದೆಲ್ಲಾ ಸುಳ್ಳಿನ ಕಂತೆ" ಎಂದು ವಾಗ್ದಾಳಿ ನಡೆಸಿದರು. ಬಂಡೀಪುರ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಮತ್ತೆ ಅವಕಾಶ ನೀಡಲಾಗುವುದೇ ಎಂದು ಕೇಳಿದಾಗ, "ಬಂಡೀಪುರ ಭಾಗದ ಜನಪ್ರತಿನಿಧಿಗಳು ನನ್ನ ಬಳಿ ಚರ್ಚೆ ಮಾಡಿದ್ದು, ಎರಡೂ ರಾಜ್ಯಗಳ ಸರ್ಕಾರಗಳ ಜತೆ ಚರ್ಚೆ ಮಾಡಿ, ಎರಡೂ ರಾಜ್ಯಗಳಿಗೂ ಯಾವರೀತಿ ಅನುಕೂಲ ಮಾಡಿಕೊಡಲಾಗುವುದು ಎಂದು ತೀರ್ಮಾನ ಮಾಡಲಾಗುವುದು. ರಾಜ್ಯದ ಹಿತ, ಜನರ ಹಿತ ಕಾಪಾಡಿಕೊಂಡು ಪರಿಶೀಲನೆ ಮಾಡಲಾಗುವುದು" ಎಂದು ತಿಳಿಸಿದರು. ತಮ್ಮದು ಹಿಟ್ಲರ್, ಕೊತ್ವಾಲ್ ಸಂಸ್ಕೃತಿ ಎಂದು ಬಿಜೆಪಿ ಟ್ವೀಟ್ ಮಾಡಿರುವ ಬಗ್ಗೆ ಕೇಳಿದಾಗ, "ಅವರು ನನಗೆ ಹಿಟ್ಲರ್ ಹೆಸರು ನೀಡುತ್ತಿದ್ದಾರಲ್ಲಾ ನಾನು ಅದನ್ನು ಸ್ವೀಕರಿಸುತ್ತೇನೆ. ನನ್ನ ಮನೆ ಮುಂದೆ ಬೋರ್ಡ್ ತಂದು ಹಾಕಲಿ" ಎಂದು ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT