ಎಚ್.ಡಿ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಜಮೀರ್ 'ಕಾಲಾ' ಕುಮಾರಸ್ವಾಮಿ ಹೇಳಿಕೆ: ಚನ್ನಪಟ್ಟಣ ಉಪಚುನಾವಣೆ ಮೇಲೆ ಪರಿಣಾಮ..?

ಏ ಕೌನ್ ಬೋಲ್ರಾಸೋ, ಕಾಲಾ ಕುಮಾರಸ್ವಾಮಿ ಎಂದು ವರ್ಣ ನಿಂದನೆಯನ್ನು ಮಾಡಿದ್ದರು. ಅಲ್ಲದೆ, ಅಲ್ಪಸಂಖ್ಯಾತರಿಂದ ಹಣ ಸಂಗ್ರಹಿಸಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆಂದು ಹೇಳಿದ್ದರು

ಬೆಂಗಳೂರು: ಕೇಂದ್ರ ಸಚಿವ ಹೆಚ್'ಡಿ.ಕುಮಾರಸ್ವಾಮಿ ಅವರ ವಿರುದ್ಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನೀಡಿರುವ ಜನಾಂಗೀಯ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಹೇಳಿಕೆ ಚನ್ನಪಟ್ಟಣ ಉಪ ಚುನಾವಣೆ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದ ಜಮೀರ್ ಅವರು ದೇವೇಗೌಡ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

ಉರ್ದು ಭಾಷಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಜಮೀರ್, ಏ ಕೌನ್ ಬೋಲ್ರಾಸೋ, ಕಾಲಾ ಕುಮಾರಸ್ವಾಮಿ ಎಂದು ಜನಾಂಗೀಯ ನಿಂದನೆಯನ್ನು ಮಾಡಿದ್ದರು. ಅಲ್ಲದೆ, ಅಲ್ಪಸಂಖ್ಯಾತರಿಂದ ಹಣ ಸಂಗ್ರಹಿಸಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆಂದು ಹೇಳಿದ್ದರು.

ದೇವೇಗೌಡ ಕುಟುಂಬದ ವಿರುದ್ಧ ಜಮೀರ್ ಅವರು ನೀಡಿರುವ ಹೇಳಿಕೆ ಕ್ಷೇತ್ರದ ಒಳಗೆ ಹಾಗೂ ಹೊರಗಿರುವ ಒಂದು ವರ್ಗದ ಜನರ ಮೇಲೆ ವಿಶೇಷವಾಗಿ ಒಕ್ಕಲಿಗರ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಕಿರಿಯ ಸಹೋದರ ಹಾಗೂ ಶ್ರವಣಬೆಳಗೊಳ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ರಾಜ್ಯ ಒಕ್ಕಲಿಗರ ಸಂಘ ನಿನ್ನೆಯಷ್ಟೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಜಮೀರ್ ಅವರ ರಾಜೀನಾಮೆಗೆ ಒತ್ತಾಯಿಸಿದೆ.

ಜಮೀರ್ ಅವರ ಹೇಳಿಕೆ ಚುನಾವಣೆ ವೇಳೆ ಸ್ವಲ್ಪಮಟ್ಟಿಗೆ ಪರಿಣಾಮ ಬೀರಬಹುದು. ನಮ್ಮ ಗೆಲುವಿನ ಅಂತರವನ್ನು ಇದು ಕಡಿಮೆ ಮಾಡಬಹುದು. ಆದರೆ, ಕಡಿಮೆ ಅಂತರದಲ್ಲಿದ್ದರೂ ನಮ್ಮ ಅಭ್ಯರ್ಥಿ ಖಂಡಿತವಾಗಿಯೂ ಗೆಲ್ಲುತ್ತಾರೆಂದು ಯೋಗೇಶ್ವರ ಪರ ಪ್ರಚಾರ ನಡೆಸಿದ್ದ ಅಲ್ಪಸಂಖ್ಯಾತ ಸಮುದಾಯದ ಶಾಸಕರೊಬ್ಬರು ಹೇಳಿದ್ದಾರೆ.

ಜಮೀರ್ ಅವರ ಹೇಳಿಕೆಯು ಮತದಾರರ ಚಿಂತನೆಗಳನ್ನು ಬದಲಾಯಿಸುವ ಸಾಧ್ಯತೆಗಳಿವೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

ಕ್ಷೇತ್ರದಲ್ಲಿ ಹಣದ ಹೊಳೆಯೇ ಹರಿದಿದ್ದು, ಮತದಾರರು ಈಗಾಗಲೇ ತಮ್ಮ ಮತ ಯಾರಿಗೆ ಹಾಕಬೇಕೆಂದು ಈಗಾಗಲೇ ನಿರ್ಧಾರ ಮಾಡಿರುವುದರಿಂದ ಹೇಳಿಕೆ ಅಷ್ಟೊಂದು ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎಂದು ಮತ್ತೊಬ್ಬ ರಾಜಕೀಯ ವಿಶ್ಲೇಷಕ ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ರಾಜಕೀಯ ಪಕ್ಷವೊಂದು ಪ್ರತಿ ಮತದಾರರಿಗೆ 1000 ರೂಪಾಯಿ, ಚಿನ್ನದ ನಾಣ್ಯ ಹಾಗೂ ದೇವರ ಚಿತ್ರ ವಿತರಿಸಿದೆ ಎನ್ನಲಾಗಿದ್ದು, ಮತ್ತೊಂದು ಪಕ್ಷದವರು ಪ್ರತಿ ಮತಕ್ಕೆ ಕೇವಲ 3 ಸಾವಿರ ರೂಪಾಯಿ ಹಂಚಿದ್ದಾರೆಂದು ಮೂಲಗಳು ತಿಳಿಸಿವೆ.

ಇದಲ್ಲದೆ ಬಟ್ಟೆ ಹಾಕಿದ ಕೋಳಿಗಳನ್ನೂ ವಿತರಿಸಿ ಮತದಾರರನ್ನು ಸೆಳೆಯುವ ಯತ್ನ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚನ್ನಪಟ್ಟಣ ಚುನಾವಣಾಧಿಕಾರಿ ಬಿನಯ್ ಮಾತನಾಡಿ, ಮತದಾರರಿಗೆ ಹಣ ಮತ್ತು ಇತರೆ ಆಮಿಷಗಳನ್ನು ಹಂಚಿರುವ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಆದರೆ, ನಗದು ಮತ್ತು ಉಡುಗೊರೆಗಳನ್ನು ನೀಡಿದ ಆರೋಪದ ಮೇಲೆ ಜೆಡಿಎಸ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಬಹಿರಂಗ ಚುನಾವಣೆ ವೇಳೆ ಮಹಿಳೆಗೆ 500 ರೂ. ನೀಡಿದ ಆರೋಪದ ಮೇಲೆ ಜಮೀರ್ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!