ಡಿ.ಕೆ ಶಿವಕುಮಾರ್ 
ರಾಜಕೀಯ

ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ ಆಮಿಷ ನಿಜ; ದೇಶ ಕಟ್ಟಲು ನೆಹರೂ ಹಾಕಿರುವ ಅಡಿಪಾಯಕ್ಕೆ ಬೆಂಗಳೂರೇ ಸಾಕ್ಷಿ: DKS

ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಬೆಂಗಳೂರು: ಐವತ್ತು ಜನ ಕಾಂಗ್ರೆಸ್ ಎಂಎಲ್ಎ ಗಳಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದರು. ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ ಎಂದು ತಿಳಿಸಿದರು.

ದೇಶದ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹಾಕಿರುವ ಭದ್ರ ಬುನಾದಿಗೆ ಬೆಂಗಳೂರು ಸಾಕ್ಷಿ ಎಂದು ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಜವಾಹರ್ ಲಾಲ್ ನೆಹರೂ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿ, ನೆಹರೂ ಅವರ ಕೊಡುಗೆ ಹಾಗೂ ಮಕ್ಕಳ ಏಳಿಗೆಗೆ ಕಾಂಗ್ರೆಸ್ ಪಕ್ಷದ ಕೊಡುಗೆಗಳನ್ನು ಸ್ಮರಿಸಿದರು. ನೆಹರೂ ಅವರು ಬೆಂಗಳೂರಿನಲ್ಲಿ ಸಾರ್ವಜನಿಕ ಉದ್ದಿಮೆಗಳು ಹೆಚ್ಎಎಲ್, ಐಟಿಐ, ಬಿಇಎಂಎಲ್, ಬಿಇಎಲ್, ಇಸ್ರೋ ಸೇರಿದಂತೆ ಅನೇಕ ಉದ್ದಿಮೆಗಳು ಆರಂಭಿಸಿದರು. ಇಲ್ಲಿರುವ ಮಾನವ ಸಂಪನ್ಮೂಲ, ಗುಣಮಟ್ಟದ ಶಿಕ್ಷಣದ ಮೇಲೆ ವಿಶೇಷ ಆದ್ಯತೆ ನೀಡಿದರು. ಅವರು ಹಾಕಿಕೊಟ್ಟ ಅಡಿಪಾಯದಲ್ಲಿ ನಾವು ಇಂದು ಈ ದೇಶ ಕಟ್ಟುತ್ತಿದ್ದೇವೆ. ಮಕ್ಕಳಿಗೆ ಶಿಕ್ಷಣ ಸಿಗಬೇಕು, ಮಕ್ಕಳು ಶಾಲೆಯಿಂದ ವಿಮುಖರಾಗಬಾರದು ಎಂದು ಎಸ್ ಎಂ ಕೃಷ್ಣ ಅವರ ಅವಧಿಯಲ್ಲಿ ಬಿಸಿಯೂಟ ಕಾರ್ಯಕ್ರಮ ನೀಡಲಾಯಿತು. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್, ಕ್ಷೀರಭಾಗ್ಯ, ಮೊಟ್ಟೆ ಭಾಗ್ಯ ನೀಡಿ ಪೌಷ್ಠಿಕತೆ ಹೆಚ್ಚಿಸಿದರು. ಇಂದಿರಾ ಗಾಂಧಿ ಅವರ ಕಾಲದಲ್ಲಿ ಅಂಗನವಾಡಿ ಕಾರ್ಯಕ್ರಮ ಮಾಡಲಾಯಿತು. ಹೀಗೆ ಕಾಂಗ್ರೆಸ್ ಸರ್ಕಾರ ಸದಾ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ.

ಇನ್ನು ಈ ವರ್ಷದಿಂದ ಗ್ರಾಮೀಣ ಭಾಗದಲ್ಲಿ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಸಿಎಸ್ ಆರ್ ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದೇವೆ. ಇದಕ್ಕಾಗಿ ನನ್ನನ್ನು ಸೇರಿದಂತೆ ನಾಲ್ಕೈದು ಮಂತ್ರಿಗಳಿಗೆ ಮುಖ್ಯಮಂತ್ರಿಗಳು ಜವಾಬ್ದಾರಿ ನೀಡಿದ್ದು, ಈಗಾಗಲೇ 50 ಶಾಲೆಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಹೀಗೆ ಸರ್ಕಾರ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT