ಹೆಚ್.ಡಿ. ಕುಮಾರಸ್ವಾಮಿ 
ರಾಜಕೀಯ

50 ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಮಿಷದ ಆರೋಪ: SIT ತನಿಖೆಗೆ ಕುಮಾರಸ್ವಾಮಿ ಒತ್ತಾಯ

ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರವನ್ನು ಉಪಯೋಗಿಸಿಕೊಂಡು, ಭ್ರಷ್ಟಾಚಾರದ ಪ್ರಕರಣವನ್ನು ತನಿಖೆ ನಡೆಸಲಿ ಎಂದರು.

ಮೈಸೂರು: ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್ ನ್ನು ಬಿಜೆಪಿ ನೀಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಕುರಿತು SIT ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರವನ್ನು ಉಪಯೋಗಿಸಿಕೊಂಡು, ಭ್ರಷ್ಟಾಚಾರದ ಪ್ರಕರಣವನ್ನು ತನಿಖೆ ನಡೆಸಲಿ ಎಂದರು.

ಬಿಜೆಪಿ 50 ಕಾಂಗ್ರೆಸ್ ಶಾಸಕರಿಗೆ ರೂ.50 ಕೋಟಿ ಆಮಿಷವೊಡಿದ್ದೆ. ಆದರೆ, ಯಾರೂ ಅದಕ್ಕೆ ಒಪ್ಪಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದರು.

ಈ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಿಎಂ ಹೇಳಿಕೆ ಬಫೂನ್‌ ಗಳು ಕೊಡುವ ಹೇಳಿಕೆ ಆಗಬಾರದು. ಅವರ ಗಮನಕ್ಕೆ ಬರದೇ ಇದು ಆಗಲ್ಲ. ಸಿಎಂ ನಿಖರವಾಗಿ 50 ಜನರಿಗೆ 50 ಕೋಟಿ ಅಂದಿದ್ದಾರೆ. ಇದಕ್ಕೂ ಕೂಡಾ ಒಂದು SIT ರಚನೆ ಮಾಡಿ ತನಿಖೆ ಮಾಡಬೇಕು ಎಂದರು.

ಸಿದ್ದರಾಮಯ್ಯ ನಡವಳಿಕೆ ನೋಡಿದ್ರೆ ಹಾಸ್ಯಾಸ್ಪದ ಅನಿಸುತ್ತಿದೆ. ವಿವಿಧ ಕಾರಣಗಳಿಗಾಗಿ ವಿಶೇಷ ತನಿಖಾ ತಂಡ ರಚಿಸಿರುವ ಸಿದ್ದರಾಮಯ್ಯ, ಈ ಪ್ರಕರಣದ ತನಿಖೆಗೂ SIT ರಚಿಸಲಿ,ಇಲ್ಲದಿದ್ದರೆ ಜನ ಸಿಎಂ ಮತ್ತು ಅವರ ಸಂಪುಟದ ಸಹೋದ್ಯೋಗಿಗಳ ಬಗ್ಗೆ ಅನುಮಾನ ಪಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT