ಸಚಿವ ಜಮೀರ್ ಅಹ್ಮದ್ ಖಾನ್ 
ರಾಜಕೀಯ

ನನ್ನ ಹೇಳಿಕೆಯಿಂದ ಯಾವುದೇ ಹಾನಿ ಆಗಿಲ್ಲ, ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ: ಸಚಿವ ಜಮೀರ್

ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯಿಂದ ಚುನಾವಣೆಯಲ್ಲಿ ಒಂದಿಷ್ಟು ಲಾಭವೂ ಆಗಿದೆ ಒಂದಷ್ಟು ನಷ್ಟವೂ ಆಗಿದೆ.

ಮಂಗಳೂರು: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು 'ಕರಿಯಾ' ಎಂದು ಕರೆದಿರುವುದರಿಂದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶನಿವಾರ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯಿಂದ ಚುನಾವಣೆಯಲ್ಲಿ ಒಂದಿಷ್ಟು ಲಾಭವೂ ಆಗಿದೆ ಒಂದಷ್ಟು ನಷ್ಟವೂ ಆಗಿದೆ. ಮುಸ್ಲಿಂ ಮತಗಳನ್ನು ಸೆಳೆದರೆ, ಇನ್ನೋಂದು ಸಮುದಾಯದಕ್ಕೆ ನೋವಾಗಿ ಮತ ಬಂದಿಲ್ಲದಿರಬಹುದು" ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಹೇಳಿದ್ದರು.

ಇಂದು ಮಂಗಳೂರಿನಲ್ಲಿ ಸಿಪಿ ಯೋಗೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, ನನ್ನ ಹೇಳಿಕೆಯಿಂದ ಯಾವುದೇ ಹಾನಿ ಆಗಿಲ್ಲ. ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಹೇಳಿದರು.

"ಜಮೀರ್‌ ಮಾತನ್ನು ವಯಕ್ತಿಕವಾಗಿ ಖಂಡಿಸುತ್ತೇನೆ. ಸಮುದಾಯಕ್ಕೆ ಹಾನಿಯಾಗಿದೆ. ಜೆಡಿಎಸ್‌ನವರು ನನಗೆ ಮತ ಹಾಕಬೇಕು ಎಂದು ಇದ್ದರು. ಆದರೆ, ಜಮೀರ್‌ ಅವರ ಹೇಳಿಕೆಯಿಂದ ಒಟ್ಟಾಗಿ ಮತ್ತೆ ಜೆಡಿಎಸ್‌ಗೆ ಮತ ಹಾಕಿದ್ದಾರೆ. ನನಗೆ ಹಿನ್ನಡೆಯಾಗಿದೆ " ಎಂದು ಸಿಪಿ ಯೋಗೇಶ್ವರ್ ಗುರುವಾರ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

SCROLL FOR NEXT