ಸಚಿವ ಜಮೀರ್ ಅಹ್ಮದ್ ಖಾನ್ 
ರಾಜಕೀಯ

ನನ್ನ ಹೇಳಿಕೆಯಿಂದ ಯಾವುದೇ ಹಾನಿ ಆಗಿಲ್ಲ, ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ: ಸಚಿವ ಜಮೀರ್

ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯಿಂದ ಚುನಾವಣೆಯಲ್ಲಿ ಒಂದಿಷ್ಟು ಲಾಭವೂ ಆಗಿದೆ ಒಂದಷ್ಟು ನಷ್ಟವೂ ಆಗಿದೆ.

ಮಂಗಳೂರು: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು 'ಕರಿಯಾ' ಎಂದು ಕರೆದಿರುವುದರಿಂದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶನಿವಾರ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯಿಂದ ಚುನಾವಣೆಯಲ್ಲಿ ಒಂದಿಷ್ಟು ಲಾಭವೂ ಆಗಿದೆ ಒಂದಷ್ಟು ನಷ್ಟವೂ ಆಗಿದೆ. ಮುಸ್ಲಿಂ ಮತಗಳನ್ನು ಸೆಳೆದರೆ, ಇನ್ನೋಂದು ಸಮುದಾಯದಕ್ಕೆ ನೋವಾಗಿ ಮತ ಬಂದಿಲ್ಲದಿರಬಹುದು" ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಹೇಳಿದ್ದರು.

ಇಂದು ಮಂಗಳೂರಿನಲ್ಲಿ ಸಿಪಿ ಯೋಗೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, ನನ್ನ ಹೇಳಿಕೆಯಿಂದ ಯಾವುದೇ ಹಾನಿ ಆಗಿಲ್ಲ. ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಹೇಳಿದರು.

"ಜಮೀರ್‌ ಮಾತನ್ನು ವಯಕ್ತಿಕವಾಗಿ ಖಂಡಿಸುತ್ತೇನೆ. ಸಮುದಾಯಕ್ಕೆ ಹಾನಿಯಾಗಿದೆ. ಜೆಡಿಎಸ್‌ನವರು ನನಗೆ ಮತ ಹಾಕಬೇಕು ಎಂದು ಇದ್ದರು. ಆದರೆ, ಜಮೀರ್‌ ಅವರ ಹೇಳಿಕೆಯಿಂದ ಒಟ್ಟಾಗಿ ಮತ್ತೆ ಜೆಡಿಎಸ್‌ಗೆ ಮತ ಹಾಕಿದ್ದಾರೆ. ನನಗೆ ಹಿನ್ನಡೆಯಾಗಿದೆ " ಎಂದು ಸಿಪಿ ಯೋಗೇಶ್ವರ್ ಗುರುವಾರ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

ಬುದ್ದ- ಜಗವೆಲ್ಲಾ ಮಲಗಿರಲು ಅವನೊಬ್ಬ ಎದ್ದ: ಬೌದ್ಧ ಪೌರ್ಣಮಿ ಮಹತ್ವ, ಆಚರಣೆ - ಸಂದೇಶ

ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು, ಗ್ರಾಹಕರಿಗೆ ರಿಲೀಫ್..!

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

SCROLL FOR NEXT