ಬಿ.ವೈ. ವಿಜಯೇಂದ್ರ 
ರಾಜಕೀಯ

ಸುಳ್ಳು ದೂರುಗಳ ಮೂಲಕ ಸಾಮಾಜಿಕ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಬೆದರಿಕೆ: ಬಿ.ವೈ ವಿಜಯೇಂದ್ರ

ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ.

ಬೆಂಗಳೂರು: ಸುಳ್ಳು ದೂರುಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆದರಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶನಿವಾರ ಆರೋಪಿಸಿದ್ದಾರೆ.

ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ವಿಜಯೇಂದ್ರ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು (ಸ್ನೇಹಮಯಿ ಕೃಷ್ಣ) ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಿಂಬಾಲಕರನ್ನು ಬಿಟ್ಟು ಸುಳ್ಳು ದೂರುಗಳನ್ನು ಕೊಡಿಸಿ ಬೆದರಿಕೆಯೊಡ್ಡುವ ತಂತ್ರ ಅನುಸರಿಸುತ್ತಿದ್ದಾರೆ. ಪೊಲೀಸ್ ಬಲ ಪ್ರಯೋಗಿಸಿ ಇಂತಹ ಆಧಾರ ರಹಿತ ದೂರುಗಳನ್ನು ದಾಖಲಿಸಿಕೊಂಡು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂವಿಧಾನಾತ್ಮಕ ದಾರಿಯಲ್ಲಿ ಹೋರಾಡುತ್ತಿರುವ ಕಾರ್ಯಕರ್ತರೊಬ್ಬರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನವರ ಹತಾಶೆಯ ಎಲ್ಲೆ ಮೀರಿದ ದೌರ್ಜನ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.

ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ. ಬಿಜೆಪಿ ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ. ಸುಳ್ಳು ದೂರು, ಬೆದರಿಕೆಗಳು ಮುಂದುವರೆದಲ್ಲಿ ಸಾಮಾಜಿಕ ಕಾರ್ಯಕರ್ತರ ರಕ್ಷಣೆಗೆ ಬಿಜೆಪಿ ನಿಲ್ಲಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!