ಬಿ.ವೈ. ವಿಜಯೇಂದ್ರ 
ರಾಜಕೀಯ

ಸುಳ್ಳು ದೂರುಗಳ ಮೂಲಕ ಸಾಮಾಜಿಕ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಬೆದರಿಕೆ: ಬಿ.ವೈ ವಿಜಯೇಂದ್ರ

ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ.

ಬೆಂಗಳೂರು: ಸುಳ್ಳು ದೂರುಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆದರಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶನಿವಾರ ಆರೋಪಿಸಿದ್ದಾರೆ.

ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ವಿಜಯೇಂದ್ರ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು (ಸ್ನೇಹಮಯಿ ಕೃಷ್ಣ) ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಿಂಬಾಲಕರನ್ನು ಬಿಟ್ಟು ಸುಳ್ಳು ದೂರುಗಳನ್ನು ಕೊಡಿಸಿ ಬೆದರಿಕೆಯೊಡ್ಡುವ ತಂತ್ರ ಅನುಸರಿಸುತ್ತಿದ್ದಾರೆ. ಪೊಲೀಸ್ ಬಲ ಪ್ರಯೋಗಿಸಿ ಇಂತಹ ಆಧಾರ ರಹಿತ ದೂರುಗಳನ್ನು ದಾಖಲಿಸಿಕೊಂಡು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂವಿಧಾನಾತ್ಮಕ ದಾರಿಯಲ್ಲಿ ಹೋರಾಡುತ್ತಿರುವ ಕಾರ್ಯಕರ್ತರೊಬ್ಬರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನವರ ಹತಾಶೆಯ ಎಲ್ಲೆ ಮೀರಿದ ದೌರ್ಜನ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.

ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ. ಬಿಜೆಪಿ ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ. ಸುಳ್ಳು ದೂರು, ಬೆದರಿಕೆಗಳು ಮುಂದುವರೆದಲ್ಲಿ ಸಾಮಾಜಿಕ ಕಾರ್ಯಕರ್ತರ ರಕ್ಷಣೆಗೆ ಬಿಜೆಪಿ ನಿಲ್ಲಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT