ಸಿದ್ದರಾಮಯ್ಯ ಮತ್ತು ಪ್ರಹ್ಲಾದ್ ಜೋಶಿ 
ರಾಜಕೀಯ

ಸರ್ಕಾರ ದಿವಾಳಿಯಾಗಿದ್ದು BPL ಕಾರ್ಡ್ ಗಳನ್ನು ಕಡಿತಗೊಳಿಸುತ್ತಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ನೇತೃತ್ವದ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ನಿರ್ವಹಿ,ಸು ಸಾಧ್ಯವಾಗದ ಕಾರಣ ಒಂದರ ಹಿಂದೆ ಒಂದರಂತೆ ಯೋಜನೆಗಳನ್ನು ಹಿಂಪಡೆಯುತ್ತಿದೆ. ಕಾಂಗ್ರೆಸ್ ಸರಕಾರ 10 ಕೆ.ಜಿ ಅಕ್ಕಿ ಘೋಷಣೆ ಮಾಡಿದರೂ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ.

ಹುಬ್ಬಳ್ಳಿ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಹೀಗಾಗಿ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ನಿರ್ವಹಿ,ಸು ಸಾಧ್ಯವಾಗದ ಕಾರಣ ಒಂದರ ಹಿಂದೆ ಒಂದರಂತೆ ಯೋಜನೆಗಳನ್ನು ಹಿಂಪಡೆಯುತ್ತಿದೆ. ಕಾಂಗ್ರೆಸ್ ಸರಕಾರ 10 ಕೆ.ಜಿ ಅಕ್ಕಿ ಘೋಷಣೆ ಮಾಡಿದರೂ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಕೇಂದ್ರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ಮಾತ್ರ ವಿತರಿಸಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಆಹಾರ ಭದ್ರತೆಗಾಗಿ ವಾರ್ಷಿಕ 2.11 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಶೇ.50ರಷ್ಟು ನಗರ ಮತ್ತು ಶೇ.75ರಷ್ಟು ಗ್ರಾಮೀಣ ಜನರಿಗೆ ಉಚಿತ ಆಹಾರವನ್ನು ಒದಗಿಸುತ್ತದೆ. ಪ್ರತಿಯೊಬ್ಬ ಅರ್ಹ ಪಡಿತರರಿಗೂ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಗೋಧಿ, ಭತ್ತ ಹಾಗೂ ಇತರೆ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ. ಇಷ್ಟಾದರೂ ದಿಢೀರನೇ ಬಿಪಿಎಲ್ ಕಾರ್ಡ್ ಏಕೆ ಕಡಿತ ಮಾಡಲಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ. ಈ ಕುರಿತು ರಾಜ್ಯದ ಆಹಾರ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆಂದು ತಿಳಿಸಿದರು.

ಬಳಿಕ ಶಕ್ತಿ ಯೋಜನೆಯನ್ನು ಟೀಕಿಸಿದ ಅವರು, ರಾಜ್ಯದ ಹಲವಾರು ಭಾಗಗಳಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಹಲವು ಮಾರ್ಗಗಳಲ್ಲಿ ಸೇವೆ ನಿಲ್ಲಿಸಲಾಗಿದೆ ಎಂದು ಕಿಡಿಕಾರಿದರು.

ಗೃಹ ಲಕ್ಷ್ಮಿ ಯೋಜನೆ ಕುರಿತು ಮಾತನಾಡಿ, ಒಂದು ಕಡೆ ಸರ್ಕಾರ ಸಹಾಯಧನ ನೀಡುತ್ತಿದೆ. ಮತ್ತೊಂದೆಡೆ ವಿದ್ಯುತ್ ದರವನ್ನು ಹೆಚ್ಚಿಸಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿಲ್ಲ. ಕೊಡಲೂ ಆಗದೆ, ಬಿಡಲೂ ಆಗದ ಸ್ಥಿತಿಯಲ್ಲಿದ್ದು, ಬಹುತೇಕ ಎಲ್ಲಾ ಗ್ಯಾರಂಟಿಗಳು ಅರ್ಧಕ್ಕೆ ನಿಂತಿವೆ. ಇದನ್ನೆಲ್ಲಾ ನೋಡಿದರೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯತ್ತ ಮುಖ ಮಾಡಿದೆ ಎಂಬುದು ಗೊತ್ತಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ..' 'ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಮಹಾ ದೋಖಾ: 1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ.. Itemized bill ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ..!

'KD' ಸಿನಿಮಾದ ಅಶ್ಲೀಲ ಹಾಡು ಲೋಕಸಭೆಯಲ್ಲಿ ಪ್ರತಿಧ್ವನಿ; 'ಸರ್ಸೆ ನಿನ್ನ ಸೆರಗ ಸರ್ಸೆ' ಬ್ಯಾನ್!

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

SCROLL FOR NEXT