ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಫಲಿತಾಂಶ ಬರುವವರೆಗೆ ಶಾಂತವಾಗಿರಿ, ಬೆಟ್ಟಿಂಗ್ ಗೆ ಬಲಿಯಾಗಬೇಡಿ: NDA ಅಭ್ಯರ್ಥಿ ನಿಖಿಲ್

ಯಾವುದೇ ಸಂದರ್ಭದಲ್ಲೂ ಫಲಿತಾಂಶಕ್ಕಾಗಿ ತಮ್ಮ ಹಣವನ್ನು ವ್ಯರ್ಥ ಮಾಡದಂತೆ ಅವರು ಕೇಳಿಕೊಂಡಿದ್ದಾರೆ, ಏಕೆಂದರೆ ಈ ದುಷ್ಕೃತ್ಯದಿಂದ ಅನೇಕ ಕುಟುಂಬಗಳು ನಾಶವಾಗಿವೆ.

ಹರದನಹಳ್ಳಿ: ಯಾರೂ ಕೂಡ ಬೆಟ್ಟಿಂಗ್ ಕಟ್ಟಿ ಆರ್ಥಿಕ ನಷ್ಟ ಅನುಭವಿಸಬೇಡಿ. ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿ ಆರಾಮಾಗಿರಿ ಎಂದು ಚನ್ನಪಟ್ಟಣ ಕ್ಷೇತ್ರದ NDA ಅಭ್ಯರ್ಥಿ, ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಯುವಕರಲ್ಲಿ ಮನವಿ ಮಾಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶಕ್ಕೆ ದಿನಗಣನೆ ಹಿನ್ನೆಲೆಯಲ್ಲಿ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ತಮ್ಮ ಮನೆ ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್, ಚನ್ನಪಟ್ಟಣ ಸೇರಿದಂತೆ ಮುಂಬರುವ ಉಪಚುನಾವಣೆ ಫಲಿತಾಂಶದ ಸುತ್ತ ಜನರು ಕೋಟ್ಯಂತರ ರೂಪಾಯಿ ಬೆಟ್ಟಿಂಗ್‌ನಲ್ಲಿ ಹೂಡಿಕೆ ಮಾಡಿರುವುದು ನನಗೆ ತಿಳಿದಿದೆ. ಚುನಾವಣಾ ಫಲಿತಾಂಶದ ಮೇಲೆ ಬೆಟ್ಟಿಂಗ್‌ ಕಟ್ಟುವುದು ಸದಾ ಆತಂಕಕ್ಕೆ ಕಾರಣವಾಗಿರುತ್ತದೆ, ಹೀಗಾಗಿ ಬೆಟ್ಟಿಂಗ್‌ನಲ್ಲಿ ತೊಡಗಬೇಡಿ, ಇದು ಕುಟುಂಬಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನಿಖಿಲ್ ಹೇಳಿದ್ದಾರೆ.

ಅದರಂತೆ, ಯಾವುದೇ ಸಂದರ್ಭದಲ್ಲೂ ಫಲಿತಾಂಶಕ್ಕಾಗಿ ತಮ್ಮ ಹಣವನ್ನು ವ್ಯರ್ಥ ಮಾಡದಂತೆ ಅವರು ಕೇಳಿಕೊಂಡಿದ್ದಾರೆ, ಏಕೆಂದರೆ ಈ ದುಷ್ಕೃತ್ಯದಿಂದ ಅನೇಕ ಕುಟುಂಬಗಳು ನಾಶವಾಗಿವೆ. ಮುಖಂಡರು, ಪಕ್ಷದ ಕಾರ್ಯಕರ್ತರು ಮತ್ತು ರಾಜಕೀಯ ನಾಯಕರ ಅನುಯಾಯಿಗಳು ಫಲಿತಾಂಶ ಪ್ರಕಟವಾಗುವವರೆಗೆ ಸುಮ್ಮನಿರಬೇಕು ಎಂದು ನಿಖಿಲ್ ಹೇಳಿದರು. ಜನರ, ದೇವರ ಆಶೀರ್ವಾದದಿಂದ ಗೆಲ್ಲುವ ವಿಶ್ವಾಸವಿದೆ. ಮಾಜಿ ಸಚಿವರು, ಶಾಸಕರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಜನ ನನ್ನ ಚುನಾವಣೆಗಾಗಿ ದುಡಿದಿದ್ದಾರೆ. ಜೆಡಿಎಸ್ ಪಕ್ಷದ ಇತಿಹಾಸದಲ್ಲಿ ಇಂತಹ ಚುನಾವಣೆ ನಡೆದಿರಲಿಲ್ಲ. ಇದು ಇತಿಹಾಸದ ಪುಟಗಳಲ್ಲಿ ಉಳಿಯುವ ಚುನಾವಣೆ ಎಂದು ನಿಖಿಲ್​ ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT