ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಫಲಿತಾಂಶ ಬರುವವರೆಗೆ ಶಾಂತವಾಗಿರಿ, ಬೆಟ್ಟಿಂಗ್ ಗೆ ಬಲಿಯಾಗಬೇಡಿ: NDA ಅಭ್ಯರ್ಥಿ ನಿಖಿಲ್

ಯಾವುದೇ ಸಂದರ್ಭದಲ್ಲೂ ಫಲಿತಾಂಶಕ್ಕಾಗಿ ತಮ್ಮ ಹಣವನ್ನು ವ್ಯರ್ಥ ಮಾಡದಂತೆ ಅವರು ಕೇಳಿಕೊಂಡಿದ್ದಾರೆ, ಏಕೆಂದರೆ ಈ ದುಷ್ಕೃತ್ಯದಿಂದ ಅನೇಕ ಕುಟುಂಬಗಳು ನಾಶವಾಗಿವೆ.

ಹರದನಹಳ್ಳಿ: ಯಾರೂ ಕೂಡ ಬೆಟ್ಟಿಂಗ್ ಕಟ್ಟಿ ಆರ್ಥಿಕ ನಷ್ಟ ಅನುಭವಿಸಬೇಡಿ. ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿ ಆರಾಮಾಗಿರಿ ಎಂದು ಚನ್ನಪಟ್ಟಣ ಕ್ಷೇತ್ರದ NDA ಅಭ್ಯರ್ಥಿ, ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಯುವಕರಲ್ಲಿ ಮನವಿ ಮಾಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶಕ್ಕೆ ದಿನಗಣನೆ ಹಿನ್ನೆಲೆಯಲ್ಲಿ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ತಮ್ಮ ಮನೆ ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್, ಚನ್ನಪಟ್ಟಣ ಸೇರಿದಂತೆ ಮುಂಬರುವ ಉಪಚುನಾವಣೆ ಫಲಿತಾಂಶದ ಸುತ್ತ ಜನರು ಕೋಟ್ಯಂತರ ರೂಪಾಯಿ ಬೆಟ್ಟಿಂಗ್‌ನಲ್ಲಿ ಹೂಡಿಕೆ ಮಾಡಿರುವುದು ನನಗೆ ತಿಳಿದಿದೆ. ಚುನಾವಣಾ ಫಲಿತಾಂಶದ ಮೇಲೆ ಬೆಟ್ಟಿಂಗ್‌ ಕಟ್ಟುವುದು ಸದಾ ಆತಂಕಕ್ಕೆ ಕಾರಣವಾಗಿರುತ್ತದೆ, ಹೀಗಾಗಿ ಬೆಟ್ಟಿಂಗ್‌ನಲ್ಲಿ ತೊಡಗಬೇಡಿ, ಇದು ಕುಟುಂಬಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನಿಖಿಲ್ ಹೇಳಿದ್ದಾರೆ.

ಅದರಂತೆ, ಯಾವುದೇ ಸಂದರ್ಭದಲ್ಲೂ ಫಲಿತಾಂಶಕ್ಕಾಗಿ ತಮ್ಮ ಹಣವನ್ನು ವ್ಯರ್ಥ ಮಾಡದಂತೆ ಅವರು ಕೇಳಿಕೊಂಡಿದ್ದಾರೆ, ಏಕೆಂದರೆ ಈ ದುಷ್ಕೃತ್ಯದಿಂದ ಅನೇಕ ಕುಟುಂಬಗಳು ನಾಶವಾಗಿವೆ. ಮುಖಂಡರು, ಪಕ್ಷದ ಕಾರ್ಯಕರ್ತರು ಮತ್ತು ರಾಜಕೀಯ ನಾಯಕರ ಅನುಯಾಯಿಗಳು ಫಲಿತಾಂಶ ಪ್ರಕಟವಾಗುವವರೆಗೆ ಸುಮ್ಮನಿರಬೇಕು ಎಂದು ನಿಖಿಲ್ ಹೇಳಿದರು. ಜನರ, ದೇವರ ಆಶೀರ್ವಾದದಿಂದ ಗೆಲ್ಲುವ ವಿಶ್ವಾಸವಿದೆ. ಮಾಜಿ ಸಚಿವರು, ಶಾಸಕರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಜನ ನನ್ನ ಚುನಾವಣೆಗಾಗಿ ದುಡಿದಿದ್ದಾರೆ. ಜೆಡಿಎಸ್ ಪಕ್ಷದ ಇತಿಹಾಸದಲ್ಲಿ ಇಂತಹ ಚುನಾವಣೆ ನಡೆದಿರಲಿಲ್ಲ. ಇದು ಇತಿಹಾಸದ ಪುಟಗಳಲ್ಲಿ ಉಳಿಯುವ ಚುನಾವಣೆ ಎಂದು ನಿಖಿಲ್​ ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ