ರೇಣುಕಾಚಾರ್ಯ 
ರಾಜಕೀಯ

ವಿಜಯೇಂದ್ರ ನೇತೃತ್ವದಲ್ಲೇ ವಕ್ಫ್ ಅನ್ಯಾಯದ ವಿರುದ್ಧ ಹೋರಾಟ; BJP 4ನೇ ತಂಡಕ್ಕೆ ಅವಕಾಶ ಬೇಡ; ದೆಹಲಿ ವರಿಷ್ಠರ ಭೇಟಿಗೆ ನಿರ್ಧಾರ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಕ್ಫ್ ವಿಧೇಯಕ ತಿದ್ದುಪಡಿ ಕುರಿತು ಜನಜಾಗೃತಿ ಅಭಿಯಾನ ನಡೆಸದಂತೆ ಪಕ್ಷದೊಳಗಿನ ಭಿನ್ನಮತೀಯ ನಾಯಕರಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಅನ್ಯಾಯದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿವಿಧ ಹಂತದ ಹೋರಾಟಕ್ಕೆ ತೀರ್ಮಾನಿಸಲಾಗಿದೆ. ರಾಜ್ಯ ನಾಯಕರ ಮೂರು ತಂಡಗಳು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಾಲ್ಕನೇ ತಂಡಕ್ಕೆ ಅವಕಾಶ ನೀಡಬಾರದು ಎಂದು ಪಕ್ಷದ ವರಿಷ್ಠರಿಗೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹದಿನೇಳು ಮಾಜಿ ಶಾಸಕರು ಸಭೆ ನಡೆಸಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಕ್ಫ್ ವಿಧೇಯಕ ತಿದ್ದುಪಡಿ ಕುರಿತು ಜನಜಾಗೃತಿ ಅಭಿಯಾನ ನಡೆಸದಂತೆ ಪಕ್ಷದೊಳಗಿನ ಭಿನ್ನಮತೀಯ ನಾಯಕರಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು. ಭಿನ್ನಮತೀಯ ನಾಯಕರು ಪ್ರವಾಸ ನಡೆಸದಂತೆ ತಡೆಯಲು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಬಿ.ಎಲ್. ಸಂತೋಷ್ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ. ಬುಧವಾರ ಮೂರು ಗಂಟೆಗಳ ಕಾಲ ನಡೆದ ಸಭೆ ನಡೆಯಿತು.

ಶಾಸಕ ಯತ್ನಾಳ್ ಅವರು ಈ ಹಿಂದೆ ವಕ್ಫ್ ಮಸೂದೆ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಪ್ರಸ್ತಾಪಿಸಿದ್ದರು. ಆದರೆ, ಪಕ್ಷದ ಹಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿ, ಯತ್ನಾಳ್ ಮತ್ತು ಇತರರು ಸ್ವತಂತ್ರವಾಗಿ ಕಾರ್ಯಕ್ರಮ ಆಯೋಜಿಸುವುದನ್ನು ತಡೆಯುವಂತೆ ಒತ್ತಾಯಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಯಾವುದೇ ಕಾರಣಕ್ಕೂ ಪ್ರವಾಸಕ್ಕೆ ಅವಕಾಶ ನೀಡಬಾರದು, ಈ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡಬೇಕು, ಯತ್ನಾಳ್ ಮತ್ತು ಅವರ ತಂಡಕ್ಕೆ ಅವಕಾಶ ನೀಡದಂತೆ ನಾಯಕತ್ವ ನೋಡಿಕೊಳ್ಳಬೇಕು ಎಂದು ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರು ಹೋರಾಟ ಮತ್ತು ಯಾವುದೇ ಪ್ರತಿಭಟನೆಯನ್ನು ಮುನ್ನಡೆಸುವುದು ಸಂಪ್ರದಾಯವಾಗಿದೆ. ಭಿನ್ನಮತೀಯ ನಾಯಕರ ಉದ್ದೇಶಿತ ಪ್ರವಾಸ ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನಿಸುವ ಸಾಧ್ಯತೆ ಇದೆ ಎಂದು ರೇಣುಕಾಚಾರ್ಯ ಎಚ್ಚರಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ ಲಿಂಬಾವಳಿ ಮುಂತಾದವರು ಹಮ್ಮಿಕೊಂಡಿರುವ ಪ್ರವಾಸ ನಿಲ್ಲಿಸದಿದ್ದರೆ ಪಕ್ಷಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದರು.

ಪಕ್ಷದ ನಾಯಕರು ದೆಹಲಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವುದಾಗಿ ತಿಳಿಸಿದ್ದಾರೆ. ವಿಜಯೇಂದ್ರ ಅವರ ಮಾರ್ಗದರ್ಶನದಲ್ಲಿ ಪಕ್ಷ ಬಲಿಷ್ಠವಾಗಿದೆ ಎಂದು ರೇಣುಕಾಚಾರ್ಯ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ. "ವಿಜಯೇಂದ್ರ ಅಧ್ಯಕ್ಷರಾಗಿರುವುದರಿಂದ ಸಂಘಟನೆಗೆ ಹೊಸ ಶಕ್ತಿ ಮತ್ತು ಚೈತನ್ಯ ಬಂದಿದೆ. ವಾಲ್ಮೀಕಿ ಮತ್ತು ಮುಡಾ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಬಗ್ಗೆ ಕೆಲವರು ಲಘುವಾಗಿ ಮಾತನಾಡುತ್ತಿರುವ ಬಗ್ಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು," ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಮೊದಲ ಹಂತದಲ್ಲಿ 15 ಸದಸ್ಯರು ಈ ಪ್ರಯತ್ನಕ್ಕೆ ಕೈಜೋಡಿಸಲಿದ್ದಾರೆ. ಬಿಜೆಪಿ ಬಲಿಷ್ಠವಾಗಿದೆ. ಪ್ರಸ್ತುತ ಮೂರು ತಂಡಗಳಿವೆ. ನಾಲ್ಕನೇ ತಂಡಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಲಾಗಿದೆ. ಪಕ್ಷದ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಭೇಟಿ ನೀಡುತ್ತೇನೆ. ವಕ್ಫ್- ಸಂಬಂಧಿಸಿದ ಹೋರಾಟವನ್ನು ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಸಬೇಕು ಎಂದು ರೇಣುಕಾಚಾರ್ಯ ತಿಳಿಸಿದರು. ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಪುನರುಚ್ಚರಿಸಿದರು. ಮಾಜಿ ಸಚಿವ ಬಿ.ಸಿ. ಪಾಟೀಲ ಹಾಗೂ ಮಾಜಿ ಶಾಸಕರಾದ ರೂಪಾಲಿ ನಾಯ್ಕ, ಸುನೀಲ ನಾಯ್ಕ, ಸುನೀಲ ಹೆಗಡೆ, ವೈ.ಸಂಪಂಗಿ, ಎಸ್.ಕೆ. ಬೆಳ್ಳುಬ್ಬಿ, ಮಾಡಾಳ್ ವಿರೂಪಾಕ್ಷಪ್ಪ, ವೆಂಕಟ ಮುನಿಯಪ್ಪ, ನಾಗೇಂದ್ರ, ನಿರಂಜನ್ ಕುಮಾರ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT