ಜೆಡಿಎಸ್ ಟ್ವೀಟ್ 
ರಾಜಕೀಯ

ವೋಟಿಗಾಗಿ ಉಚಿತ, ಚುನಾವಣೆ ಬಳಿಕ ದರ ಏರಿಕೆ ಖಚಿತ; ಕಾಂಗ್ರೆಸ್‌ ಸರ್ಕಾರ ದಿವಾಳಿಯತ್ತ, ಇಂದಿರಾ ಕ್ಯಾಂಟೀನ್‌ ಸಿಬ್ಬಂದಿಗಿಲ್ಲ 6 ತಿಂಗಳಿಂದ ವೇತನ!

ರಾಜ್ಯದ ಆರ್ಥಿಕ ಸ್ಥಿತಿಯನ್ನು ಪಾತಳಕ್ಕೆ ತಳ್ಳಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬಡವರಿಗೆ ಶಾಪವಾಗಿ ಪರಿಣಮಿಸಿದೆ. ಸರ್ಕಾರ ಹಣ ಬಾಕಿ ಉಳಿಸಿಕೊಂಡಿರುವ ಕಾರಣ ಬೆಂಗಳೂರಿನ ಹಲವೆಡೆ ಇಂದಿರಾ ಕ್ಯಾಂಟೀನ್‌ ಗಳು ಬಂದ್‌ ಆಗಿವೆ.

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಹರಿಹಾಯ್ದಿದೆ.

ವೋಟಿಗಾಗಿ ಉಚಿತ, ಚುನಾವಣೆ ಬಳಿಕ ದರ ಏರಿಕೆ ಖಚಿತ !ಸರ್ಕಾರಿ ಆಸ್ಪತ್ರೆ ಸೇವೆಗಳ ದರ ಹೆಚ್ಚಳ ಯಾವ ಮಾದರಿ ? ಸಿಎಂ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರೇ, ಸರ್ಕಾರಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ಕೊನೆಯ ಆಶಾಕಿರಣವಾಗಿದ್ದವು. ಆದರೆ ಕಾಂಗ್ರೆಸ್‌ ಆಡಳಿತದಲ್ಲಿ ಬಡವರಿಗೆ ದುಬಾರಿಯಾಗುತ್ತಿವೆ. 30 ರು. ಒಳರೋಗಿ ಹಾಸಿಗೆ ಈಗ 50 ರೂಪಾಯಿ ಆಗಿದೆ, 750 ರು. ವಿಶೇಷ ವಾರ್ಡ್ ಈಗ 1000 ರೂಪಾಯಿ ಆಗಿದೆ, ಯಾರ ಅಭಿವೃದ್ಧಿಗಾಗಿ ಈ ದರ ಏರಿಕೆ ? ಎಂದು ಜೆಡಿಎಸ್ ಪ್ರಶ್ನಿಸಿದೆ.

ರಾಜ್ಯದ ಆರ್ಥಿಕ ಸ್ಥಿತಿಯನ್ನು ಪಾತಳಕ್ಕೆ ತಳ್ಳಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬಡವರಿಗೆ ಶಾಪವಾಗಿ ಪರಿಣಮಿಸಿದೆ. ಸರ್ಕಾರ ಹಣ ಬಾಕಿ ಉಳಿಸಿಕೊಂಡಿರುವ ಕಾರಣ ಬೆಂಗಳೂರಿನ ಹಲವೆಡೆ ಇಂದಿರಾ ಕ್ಯಾಂಟೀನ್‌ ಗಳು ಬಂದ್‌ ಆಗಿವೆ. ಊಟ ಪೂರೈಸಲು ಗುತ್ತಿಗೆ ಪಡೆದಿರುವ ಕಂಪನಿಗೆ ಬಿಬಿಎಂಪಿ ಹಣ ಪಾವತಿಸಿಲ್ಲ. ಜೊತೆಗೆ ಕ್ಯಾಂಟೀನ್‌ ಸಿಬ್ಬಂದಿಗೂ 6 ತಿಂಗಳಿಂದ ವೇತನ ನೀಡಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ದಿವಾಳಿ ಅಂಚಿಗೆ ತಲುಪಿದ್ದು, ಅವೈಜ್ಞಾನಿಕ ಗ್ಯಾರಂಟಿ ಹೊರೆಯಿಂದ ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಜೆಡಿಎಸ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT