ಮಧು ಬಂಗಾರಪ್ಪ, ಕೆ,ಎನ್ ರಾಜಣ್ಣ ಮತ್ತು ಎಂ.ಸಿ ಸುಧಾಕರ್ 
ರಾಜಕೀಯ

ಅಧಿವೇಶನದ ನಂತರ ಸಂಪುಟ ಪುನಾರಚನೆ: ಹಲವರಿಗೆ ಕೊಕ್; ಹಿಟ್ ಲಿಸ್ಟ್ ನಲ್ಲಿ ಮಧು, ರಾಜಣ್ಣ, ಸುಧಾಕರ್!

ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೇ ಹಿನ್ನಡೆ ಎದುರಿಸುತ್ತಿದ್ದಾರೆ. ಅದರ ಜೊತೆಗೆ ಅವರ ಸಂಪುಟದ ಕೆಲವು ಸಹೋದ್ಯೋಗಿಗಳು ಸಹ ಹಗರಣಗಳಲ್ಲಿ ಭಾಗಿಯಾಗಿರುವುದರಿಂದ ಆಕಾಂಕ್ಷಿಗಳು ಆಶಾದಾಯಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೆಚ್ಚಾಗುವ ಸಾಧ್ಯತೆಯಿದೆ, ಹನ್ನೆರಡು ಆಕಾಂಕ್ಷಿಗಳು ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ.

ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೇ ಹಿನ್ನಡೆ ಎದುರಿಸುತ್ತಿದ್ದಾರೆ. ಅದರ ಜೊತೆಗೆ ಅವರ ಸಂಪುಟದ ಕೆಲವು ಸಹೋದ್ಯೋಗಿಗಳು ಸಹ ಹಗರಣಗಳಲ್ಲಿ ಭಾಗಿಯಾಗಿರುವುದರಿಂದ ಆಕಾಂಕ್ಷಿಗಳು ಆಶಾದಾಯಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಂತರ ಸಚಿವ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನ್ನ ಅಧಿಕಾರವನ್ನು ದೃಢವಾಗಿ ಸ್ಥಾಪಿಸಲು ಪಕ್ಷದೊಳಗೆ ಮತ್ತು ಪ್ರತಿಪಕ್ಷಗಳು ಹೇಳುತ್ತಿರುವ ಸಿಎಂ ಬದಲಾವಣೆ ಸುದ್ದಿಯ ಊಹಾಪೋಹಗಳಿಗೆ ತೆರೆ ಎಳೆಯುವುದು ತಂತ್ರವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮತ್ತು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ ಸೇಠ್ ಅವರು ಸಚಿವರಾಗುವ ಆಸೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್ ಕೀಡ ಸಂಪುಟ ಪುನಾರಚನೆಗೆ ಮನಸ್ಸು ಮಾಡಿರುವಂತಿದೆ. ನರೇಂದ್ರಸ್ವಾಮಿ ಅವರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಸಚಿವ ಸ್ಥಾನದ ಬೇಡಿಕೆ ಇರಿಸಿದ್ದಾರೆ. ಶುಕ್ರವಾರ ಹಿರಿಯ ನಾಯಕ ಹಾಗೂ ನವದೆಹಲಿಯಲ್ಲಿರುವ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಕೂಡ ಖರ್ಗೆ ಅವರನ್ನು ಭೇಟಿ ಮಾಡಿದ್ದರು.

ಪಕ್ಷದ ಹೈಕಮಾಂಡ್ ಕೂಡ ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರ ಕಳಪೆ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಅವರಲ್ಲಿ ಕೆಲವರು ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರನ್ನು ಕೈಬಿಡಬಹುದು ಅಥವಾ ಪುನರ್ರಚನೆಯ ಭಾಗವಾಗಿ ಬೇರೆ ಖಾತೆಯನ್ನು ನೀಡಬಹುದು ಎಂದು ವರದಿಯಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಪುನರ್ವಿಂಗಡಣೆಯಾದಾಗ ಆದಾಯ ಖಾತೆಯನ್ನು ಪಡೆಯಬಹುದು ಎಂದು ಮೂಲವೊಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಹಿಟ್ ಲಿಸ್ಟ್‌ನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧಿವೇಶನಕ್ಕೂ ಮುನ್ನವೇ ಸಿದ್ದರಾಮಯ್ಯ ಅವರು ಮಾಜಿ ಬುಡಕಟ್ಟು ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಾಗೇಂದ್ರ ರಾಜೀನಾಮೆ ನೀಡಿದ್ದರು. ಇಡಿ ಮತ್ತು ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT