ಡಿ.ಕೆ ಶಿವಕುಮಾರ್ 
ರಾಜಕೀಯ

ಬೈ ಎಲೆಕ್ಷನ್ ಫಲಿತಾಂಶ- 2028 ರ ವಿಧಾನಸಭೆ ಚುನಾವಣೆಯ ಗೆಲುವಿಗೆ ಮುನ್ನುಡಿ: ಡಿಕೆ ಶಿವಕುಮಾರ್‌

ವಿಪಕ್ಷಗಳು ನಮ್ಮ ಗ್ಯಾರಂಟಿಯನ್ನು ಟೀಕೆ ಮಾಡಿದ್ದವು. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಡಿ ಎಂದು ಜನ ತೀರ್ಪು ಕೊಟ್ಟಿದ್ದಾರೆ. ಜನರ ಬದುಕಿನ ಮೇಲೆ ರಾಜಕೀಯ ಮಾಡಬೇಡಿ ಅಂತ ಸಂದೇಶ ಜನ ಕೊಟ್ಡಿದ್ದಾರೆ. ಟೀಕೆಗಳು ಸಾಯುತ್ತವೆ ಕೆಲಸ ಉಳಿಯತ್ತವೆ.

ಬೆಂಗಳೂರು: ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ‌ ಹೇಳಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಹೆಚ್​ಡಿಕೆ ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಕುರುಹುಗಳಿಗೆ ಜನ ಉತ್ತರ ನೀಡಿದ್ದಾರೆ. ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲೂ ನಾವು ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು. ಶಿಗ್ಗಾಂವಿಯಲ್ಲಿ ಭರತ್ ಸೋಲು ಅನ್ನೋದು ಹೇಳಲ್ಲ. ಅಲ್ಲಿ ಈ ಹಿಂದೆ ನಮ್ಮ ಅಭ್ಯರ್ಥಿ ಸೋತಿದ್ದರು. ಈಗ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಂಡೂರಿಲ್ಲಿನಲ್ಲೂ ನಾವು ಗೆದ್ದಿದ್ದೇವೆ. ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ, ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದರು, ಆದರೆ ಮತದಾರರು ಪ್ರಜ್ಞಾವಂತರಿದ್ದಾರೆ ಎಂದು ಹೇಳಿದರು.

ವಿಪಕ್ಷಗಳು ನಮ್ಮ ಗ್ಯಾರಂಟಿಯನ್ನು ಟೀಕೆ ಮಾಡಿದ್ದವು. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಡಿ ಎಂದು ಜನ ತೀರ್ಪು ಕೊಟ್ಟಿದ್ದಾರೆ. ಜನರ ಬದುಕಿನ ಮೇಲೆ ರಾಜಕೀಯ ಮಾಡಬೇಡಿ ಅಂತ ಸಂದೇಶ ಜನ ಕೊಟ್ಡಿದ್ದಾರೆ. ಟೀಕೆಗಳು ಸಾಯುತ್ತವೆ ಕೆಲಸ ಉಳಿಯತ್ತವೆ. ಇದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದರು. ಜನರಿಗೆ ಸರಿಯಾಗಿ ಗ್ಯಾರಂಟಿ ಹೋಗುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿದ್ದವು. 56 ಸಾವಿರ ಕೋಟಿ ರೂ. ಗ್ಯಾರಂಟಿ ಗೆ ಕೊಟ್ಟಿದ್ದೇವೆ. ಪ್ರತಿ ಕ್ಷೇತ್ರಕ್ಕೆ 200 ಕೋಟಿ ರೂ. ಹಣ ಹೋಗಿದೆ. ಇದೆಲ್ಲವು ಅಭಿವೃದ್ಧಿ ಅಲ್ಲವೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT