ಮುಖ್ಯಮಂತ್ರಿ ಸಿದ್ದರಾಮಯ್ಯ - ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ Photo| Express
ರಾಜಕೀಯ

ಉಪ ಚುನಾವಣೆ: ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ಭರ್ಜರಿ ಗೆಲುವು

ಎಸ್‌ಟಿ ಮೀಸಲು ಕ್ಷೇತ್ರ ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ತುಕುರಾಮ್ ಅವರ ಪತ್ನಿ ಅನ್ನಪೂರ್ಣಾ ಅವರು ಜಯಭೇರಿ ಬಾರಿಸಿದ್ದಾರೆ.

ಬಳ್ಳಾರಿ: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಎಸ್‌ಟಿ ಮೀಸಲು ಕ್ಷೇತ್ರ ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ತುಕುರಾಮ್ ಅವರ ಪತ್ನಿ ಅನ್ನಪೂರ್ಣಾ ಅವರು ಜಯಭೇರಿ ಬಾರಿಸಿದ್ದಾರೆ.

ಇ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧದ ಜಿದ್ದಾಜಿದ್ದಿನ ಹೋರಾಟದಲ್ಲಿ 9,105 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಸಂಡೂರಿನಲ್ಲಿ ಒಟ್ಟು 17 ಸುತ್ತಿನ ಮತ ಎಣಿಕೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು 88,727 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಹನುಮಂತು ಅವರು 79622 ಮತಗಳನ್ನು ಗಳಿಸಿ ಪರಭಾವಗೊಂಡಿದ್ದಾರೆ.

ಸಂಡೂರು ಶಾಸಕರಾಗಿದ್ದ ಇ ತುಕಾರಾಂ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು, ಈಗ ಅವರ ಪತ್ನಿ ಸಹ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್ ಬೆದರಿಕೆ

'ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಬಗ್ಗೆ ಭಾರತದ ಮೌನ ಅರ್ಥವೇ ಆಗುತ್ತಿಲ್ಲ; ದೇಶದ ಪರವಾಗಿ ನಿಂತಿದ್ದು ಇದೇ ಟೆಹ್ರಾನ್!'

ತಪ್ಪಿದ ಲಿಫ್ಟ್ ದುರಂತ: ಹೊರಬರುವಾಗ ದಿಢೀರ್ ಚಾಲನೆ, ಕೆಳಗೆ ಬಿದ್ದ ವ್ಯಕ್ತಿ! Video ವೈರಲ್!

ಇರಾನ್-ಇಸ್ರೇಲ್ ಸಂಘರ್ಷದ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ

ಕಾಶ್ಮೀರ: ಪೂಂಚ್‌ನ ಭಿಂಬರ್ ಗಲಿ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

SCROLL FOR NEXT