ಸಿದ್ದರಾಮಯ್ಯ  
ರಾಜಕೀಯ

ಅಪಪ್ರಚಾರ, ಸುಳ್ಳು ಆರೋಪ ಮೆಟ್ಟಿನಿಂತು ಸಾಧಿಸಿದ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ: ಸಿಎಂ ಸಿದ್ದರಾಮಯ್ಯ

ಪ್ರತಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ ಎಂದಿದ್ದಾರೆ.

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಉಪ ಚುನಾವಣೆಯ ಫಲಿತಾಂಶದ ಕುರಿತು ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಪ್ರತಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ ಎಂದಿದ್ದಾರೆ.

ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನಾನು ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ.

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT