ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ 
ರಾಜಕೀಯ

3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಸಚಿವ ಶರಣಪ್ರಕಾಶ್ ಪಾಟೀಲ್

ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಮತ್ತು ಮೈಸೂರು ಭಾಗದ ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದರಿಂದ ಎಕ್ಸಿಟ್ ಪೋಲ್‌ಗಳು ಸುಳ್ಳು ಎಂದು ಸಾಬೀತಾಗಿದೆ.

ಕಲಬುರಗಿ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾ8ಗಿದೆ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಮತ್ತು ಮೈಸೂರು ಭಾಗದ ಚನ್ನಪಟ್ಟಣದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದರಿಂದ ಎಕ್ಸಿಟ್ ಪೋಲ್‌ಗಳು ಸುಳ್ಳು ಎಂದು ಸಾಬೀತಾಗಿದೆ ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಿಡಿಕಾರಿದ ಅವರು, ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಮತ್ತು ವಕ್ಫ್ ಆಸ್ತಿ ವಿಚಾರದಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು. ಆದರೆ, ಜನರು ತಕ್ಕ ಉತ್ತರ ನೀಡಿದ್ದಾರೆ. ಇದು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ತಂದಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದಾದ್ಯಂತ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದೆ. ಒಂದೂವರೆ ವರ್ಷದೊಳಗೆ ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರನ್ನು ತಲುಪುವಂತೆ ಮಾಡಿದೆ. ಇದರ ಫಲಿತಾಂಶ ಉಪಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಬಿಜೆಪಿ-ಜೆಡಿಎಸ್ ನಾಯಕರು ಜನರನ್ನು ವಂಚಿಸಲು ಹಲವು ತಿಂಗಳುಗಳಿಂದ ಸುಳ್ಳು ನಾಟಕಗಳನ್ನು ಮಾಡಿದರು. ಆದರೆ, ಮತದಾರರು ಪ್ರತಿ ಕ್ಷಣವೂ ತಮ್ಮ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT