ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

ಅಹಿಂದ ಮತಗಳ ಬಲವರ್ಧನೆಯಿಂದ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲುವು: ಸತೀಶ್‌ ಜಾರಕಿಹೊಳಿ

ಶಿಗ್ಗಾಂವಿಯಲ್ಲಿ ಎಲ್ಲಾ ಹಿಂದುಳಿದ ವರ್ಗಗಳು ಮತ್ತು ಒಬಿಸಿಗಳನ್ನು ಒಗ್ಗೂಡಿಸಿ ಬಿಜೆಪಿಯನ್ನು ಸೋಲಿಸಲು ಪರಿಣಾಮಕಾರಿ ಕಾರ್ಯತಂತ್ರವನ್ನು ರೂಪಿಸಲಾಗಿತ್ತು. ಕ್ಷೇತ್ರದಾದ್ಯಂತ ಪಕ್ಷದ ಪ್ರಚಾರಕ್ಕಾಗಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಿದ್ದರು.

ಬೆಳಗಾವಿ: ಅಹಿಂದ ಮತಗಳ ಯಶಸ್ವಿ ಕ್ರೋಡೀಕರಣವು ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹಿಂದೂ-ಮುಸ್ಲಿಂ ರಾಜಕಾರಣವನ್ನು ಹತ್ತಿಕ್ಕಲು ಕಾಂಗ್ರೆಸ್ ಯತ್ನ ನಡೆಸಿದ್ದು, ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಪಕ್ಷದ ಅಭ್ಯರ್ಥಿ ಯಾಸೀರ್ ಪಠಾಣ್ ಅವರ ಗೆಲುವು ಕಾಂಗ್ರೆಸ್ ಪಕ್ಷದ ಮೇಲಿನ ಮುಸ್ಲಿಮರ ವಿಶ್ವಾಸವನ್ನು ಹೆಚ್ಚಿಸಿದೆ. ಶಿಗ್ಗಾಂವಿಯಲ್ಲಿ ಎಲ್ಲಾ ಹಿಂದುಳಿದ ವರ್ಗಗಳು ಮತ್ತು ಒಬಿಸಿಗಳನ್ನು ಒಗ್ಗೂಡಿಸಿ ಬಿಜೆಪಿಯನ್ನು ಸೋಲಿಸಲು ಪರಿಣಾಮಕಾರಿ ಕಾರ್ಯತಂತ್ರವನ್ನು ರೂಪಿಸಲಾಗಿತ್ತು. ಕ್ಷೇತ್ರದಾದ್ಯಂತ ಪಕ್ಷದ ಪ್ರಚಾರಕ್ಕಾಗಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ಸರ್ಕಾರದ ಎಲ್ಲ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನವೂ ಪಠಾಣ್ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.

ಶಿಗ್ಗಾಂವಿಯಲ್ಲಿ ನಾಯಕತ್ವದ ಬಿಕ್ಕಟ್ಟಿನಿಂದಾಗಿ ಅಲ್ಲಿನ ಐದೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲು ಕಂಡಿತ್ತು. ಹೀಗಾಗಿ ಬಹುತೇಕ ಸಮೀಕ್ಷೆಗಳು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಸೋಲು ಕಾಣುವ ಭವಿಷ್ಯ ನುಡಿದಿತ್ತು. ಆದರೆ, ಪಕ್ಷದ ಪ್ರಬಲ ಪ್ರಚಾರ ಕೊನೆಗೂ ಫಲ ನೀಡಿದೆ ಎಂದರು.

ಧರ್ಮದ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಹಲವು ಚುನಾವಣೆಯನ್ನು ಗೆದ್ದಿದೆ. ಆದರೆ, ಈ ಬಾರಿ ಬಿಜೆಪಿಗೆ ಧರ್ಮ ರಾಜಕಾರಣದಿಂದ ಯಾವುದೇ ಪ್ರಯೋಜನವಾಗಿಲ್ಲ, ಕಳೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಇದೇ ರೀತಿಯ ಕಾರ್ಯತಂತ್ರವನ್ನು ರೂಪಿಸಿದ್ದೆವು. ಶಿಗ್ಗಾಂವಿಯಲ್ಲೂ ಈ ತಂತ್ರ ಸಹಾಯ ಮಾಡಿದೆ. ಶಿಗ್ಗಾಂವಿ ಗೆಲುವು ಪಕ್ಷಕ್ಕೆ ದೊಡ್ಡ ಉತ್ತೇಜನ ನೀಡಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ ವೈರಲ್..! ಅಮಾನತು

'ಸಚಿವರೇ ಇಲ್ಲ.. ಏನ್ ಮಾಡ್ಬೇಕು..?' ಆಗ ಯುಟಿ ಖಾದರ್, ಈಗ ಹೊರಟ್ಟಿ..: ಅಧಿವೇಶನಕ್ಕೆ ಸಚಿವರ ಗೈರು ಕುರಿತು ಪರಿಷತ್ ಸಭಾಪತಿ ಅಸಮಾಧಾನ!

ಬಂಗಾಳ ಚುನಾವಣೆ: 291 ಸ್ಥಾನಗಳಲ್ಲಿ ಮಾತ್ರ TMC ಸ್ಪರ್ಧೆ; ಉಳಿದ ಸ್ಥಾನಗಳ ಕಥೆ ಏನು?

Bengaluru Rain: ಯುಗಾದಿ ಮುನ್ನವೇ ಬೆಂಗಳೂರಿನ ಗಾಳಿ ಸಹಿತ ಮಳೆ, ಸುರಿದ ಆಲಿಕಲ್ಲು.. 3-4 ದಿನ ವರ್ಷಧಾರೆ ಸಾಧ್ಯತೆ!

ಭಾರತದ ಪದವೀಧರರಲ್ಲಿ ಶೇ. 40 ರಷ್ಟು ಜನರಿಗೆ ಉದ್ಯೋಗ ಸಿಗುತ್ತಿಲ್ಲ: ವರದಿ

SCROLL FOR NEXT