ಸಿಎಂ ಸಿದ್ದರಾಮಯ್ಯ, ಆರ್.ಅಶೋಕ್ ಸಾಂದರ್ಭಿಕ ಚಿತ್ರ 
ರಾಜಕೀಯ

ಉಪ ಚುನಾವಣೆ: ಮೂರು ಲೋಕ ಗೆದ್ದು ಬಿಟ್ಟ ಭ್ರಮೆಯಲ್ಲಿ ಕಾಂಗ್ರೆಸ್- ಆರ್. ಅಶೋಕ್ ವಾಗ್ದಾಳಿ

ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡರಲ್ಲ, ಅದು ಸುಳ್ಳಾ? ಮೂಡಾ ಹಗರಣದಲ್ಲಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ತಪ್ಪನ್ನ ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ?

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ, ಓಲೈಕೆ ರಾಜಕಾರಣದ ಮೂಲಕ ಒಂದು ಸಮುದಾಯದ ಮತ ಗಳಿಸಿ ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ ಭ್ರಮೆಯಲ್ಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಅಪ ಪ್ರಚಾರ ವಿರುದ್ಧ ದಿಗ್ವಿಜಯ ಎಂಬ ಮಾಧ್ಯಮವೊಂದರ ವರದಿಯನ್ನು ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ ವಿರುದ್ಧ ಕಿಡಿಕಾರಿರುವ ಅಶೋಕ್, ಸಿಎಂ ಸಿದ್ದರಾಮಯ್ಯ ನವರೇ, ಯಾವುದು ಸುಳ್ಳು, ಯಾವುದು ಅಪಪ್ರಚಾರ? ಎಂದು ಪ್ರಶ್ನಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡರಲ್ಲ, ಅದು ಸುಳ್ಳಾ? ಮೂಡಾ ಹಗರಣದಲ್ಲಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ತಪ್ಪನ್ನ ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ? ಮೂಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆ ಅಗತ್ಯ ಇದೆ ಮಾನ್ಯ ಹೈಕೋರ್ಟ್ ಘಂಟಾಘೋಷವಾಗಿ ಹೇಳಿದ್ದು ಸುಳ್ಳಾ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ,

ಮದ್ಯ ಮಾರಾಟಗಾರರ ಸಂಘ ತಮಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಇಲಾಖೆಯಲ್ಲಿ 'ಮಂಥ್ಲಿ ಮನಿ' ಹೆಸರಿನಲ್ಲಿ, ವರ್ಗಾವಣೆ ದಂಧೆಯಲ್ಲಿ, ಲೈಸೆನ್ಸ್ ನವೀಕರಣದಲ್ಲಿ 700 ಕೋಟಿ ರೂ. ಲಂಚದ ವ್ಯವಹಾರ ನಡೆದಿದೆ ಎಂದು ಹೇಳಿರುವುದು ಸುಳ್ಳಾ? ವಕ್ಫ್ ಮಂಡಳಿ ಹೆಸರಿನಲ್ಲಿ ಸರ್ಕಾರಿ ಆಸ್ತಿ ಪಾಸ್ತಿ, ಮಠ ಮಂದಿರಗಳ ಜಾಗ, ರೈತರ ಕೃಷಿ ಜಮೀನುಗಳಿಗೆ ಕಳಿಸಿ, ರಾತ್ರೋರಾತ್ರಿ ದಾಖಲೆಗಳನ್ನು ತಿದ್ದುತ್ತಿರುವುದು ಸುಳ್ಳಾ?ತಮ್ಮ ಸರ್ಕಾರದ ಭ್ರಷ್ಟಾಚಾರಕ್ಕೆ, ಕಿರುಕುಳಕ್ಕೆ ಈವರೆಗೂ ನಾಲ್ಕು ಜನ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಸುಳ್ಳಾ? ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರ ಈ ಕುತಂತ್ರ, ಷಡ್ಯಂತ್ರ, ನಾಟಕ ಜಾಸ್ತಿ ದಿನ ನಡೆಯುವುದಿಲ್ಲ. ತಡವಾದರೂ ಸತ್ಯಕ್ಕೆ ಎಂದಿಗೂ ಜಯ. ಸತ್ಯಮೇವ ಜಯತೇ! ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT