ಜೆಡಿಎಸ್ 
ರಾಜಕೀಯ

ಹರಕು ಬಾಯಿಗಳಿಗೆ, ತೂತುಬಿದ್ದ ಮಡಿಕೆಯಂತಾಗಿರುವ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ; ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ!

ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್ ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ...

ಬೆಂಗಳೂರು: ಅನ್ಯರ ಬಗ್ಗೆ ಹಗುರವಾಗಿ ಮಾತಾನಾಡುವ ನಿಮ್ಮ ಹರಕು ಬಾಯಿಗಳಿಗೆ, ನಿಮ್ಮ ತೂತುಬಿದ್ದ ಮಡಿಕೆಯಂತಾಗಿರುವ ನಿಮ್ಮ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಜೆಡಿಎಸ್ ಟಾಂಗ್ ನೀಡಿದೆ.

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್, ಪಳೆಯುಳಿಕೆ ಪಾರ್ಟಿ ಕಾಂಗ್ರೆಸ್! ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ ಕಾಂಗ್ರೆಸ್ ಪಕ್ಷದ ಪಕಳೆಗಳು ದೇಶಾದ್ಯಂತ ಒಂದೊಂದೇ ಉದುರುತ್ತಿವೆ. ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್ ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ ಎಂದಿದೆ.

ಮಹಾರಾಷ್ಟ್ರದಲ್ಲಿ ಮತದಾರರು ಕೈ ಪಕ್ಷದ ಪೋಸ್ಟ್ ಮಾರ್ಟಮ್ ಮಾಡಿದ್ದಾರೆ. ಕಾಂಗ್ರೆಸ್ಸಿಗರೇ.. ಅನ್ಯರ ಬಗ್ಗೆ ಹಗುರವಾಗಿ ಮಾತಾನಾಡುವ ನಿಮ್ಮ ಹರಕು ಬಾಯಿಗಳಿಗೆ, ನಿಮ್ಮ ತೂತುಬಿದ್ದ ಮಡಿಕೆಯಂತಾಗಿರುವ ನಿಮ್ಮ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ. 288 ಸೀಟುಗಳ ಮಹಾರಾಷ್ಟ್ರದಲ್ಲಿ ಹದಿನಾರೇ ಸೀಟಿಗೆ ಬೋರಲು ಬಿದ್ದ ಸೋಕಾಲ್ಡ್ ನ್ಯಾಷನಲ್ ಪಾರ್ಟಿ ನಾಯಕರೇ, ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ. ಇನ್ನು ಜಾರ್ಖಂಡ್; ಜೆಎಂಎಂ ಪರಾವಲಂಬಿಯಾಗಿ ಪರದೇಸಿ ಬಾಳ್ವೆ ಮಾಡಿಕೊಂಡು 81 ಸೀಟಿನ ಪೈಕಿ ಹದಿನಾರಕ್ಕೆ ಅಡ್ಡಡ್ಡ ಬಿದ್ದ ನಿಮ್ಮ ಪಕ್ಷಕ್ಕೆ ಅಲ್ಲಿಯೂ ಜನ ಚಟ್ಟ ಕಟ್ಟಿದ್ದಾರೆ. ಸರಳ ಲೆಕ್ಕ ಕಾಂಗ್ರೆಸ್ಸಿಗರೇ.. 288+81=369. ಇಷ್ಟರಲ್ಲಿ ಒಟ್ಟು ಎಷ್ಟು ಗೆದ್ದಿದ್ದೀರಿ? ಕೇವಲ.. ಕೇವಲ.. 32!! ಅದರಲ್ಲಿಯೂ ಮಹಾರಾಷ್ಟ್ರದಲ್ಲಿ -28!! ಛೀ.. ನಿಮ್ಮ ಜನ್ಮಕ್ಕೆ.. ನಿಮಗಿಂತ ನಾವು ಕಳಪೆಯೇ..? 224 ಕ್ಷೇತ್ರಗಳಲ್ಲಿ 19 ಗೆದ್ದಿದ್ದೆವು. ಅದೂ ಯಾವ ಮೈತ್ರಿಯೂ ಇಲ್ಲದೆ!! ನಾವು ಪ್ರಾದೇಶಿಕ, ನೀವು ಸೋಕಾಲ್ಡ್ ನ್ಯಾಶನಲ್ ಎಂದು ಜೆಡಿಎಸ್ ಲೇವಡಿ ಮಾಡಿದೆ.

ಐರೆನ್ ಲೆಗ್ ಪಾರ್ಟಿ ಕಾಂಗ್ರೆಸ್, ಮಹಾರಾಷ್ಟ್ರದಲ್ಲಿ ಮೈತ್ರಿ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸಿದೆ. ಅದಕ್ಕೆ ಬಲಿಯಾದ ಪಕ್ಷ ಉದ್ಧವ್ ಠಾಕ್ರೆಯವರ ಶಿವಸೇನೆ!! ಮೈತ್ರಿಗೆ, ಮೈತ್ರಿ ಪಕ್ಷಗಳಿಗೆ ಮಿತ್ರದ್ರೋಹ ಮಾಡುತ್ತಿರುವ ಕಾಂಗ್ರೆಸ್ ಸಂವಿಧಾನವನ್ನೇ ಅಣಕಿಸುತ್ತಿದೆ. ಅನ್ಯರ ಅಣಕವೇ ಮನೆಹಾಳು ಕಾಂಗ್ರೆಸ್ಸಿನ ಕಾಯಕ ಎಂದು ವ್ಯಂಗ್ಯವಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT