ಜೆಡಿಎಸ್ 
ರಾಜಕೀಯ

ಹರಕು ಬಾಯಿಗಳಿಗೆ, ತೂತುಬಿದ್ದ ಮಡಿಕೆಯಂತಾಗಿರುವ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ; ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ!

ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್ ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ...

ಬೆಂಗಳೂರು: ಅನ್ಯರ ಬಗ್ಗೆ ಹಗುರವಾಗಿ ಮಾತಾನಾಡುವ ನಿಮ್ಮ ಹರಕು ಬಾಯಿಗಳಿಗೆ, ನಿಮ್ಮ ತೂತುಬಿದ್ದ ಮಡಿಕೆಯಂತಾಗಿರುವ ನಿಮ್ಮ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಜೆಡಿಎಸ್ ಟಾಂಗ್ ನೀಡಿದೆ.

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್, ಪಳೆಯುಳಿಕೆ ಪಾರ್ಟಿ ಕಾಂಗ್ರೆಸ್! ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ ಕಾಂಗ್ರೆಸ್ ಪಕ್ಷದ ಪಕಳೆಗಳು ದೇಶಾದ್ಯಂತ ಒಂದೊಂದೇ ಉದುರುತ್ತಿವೆ. ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್ ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ ಎಂದಿದೆ.

ಮಹಾರಾಷ್ಟ್ರದಲ್ಲಿ ಮತದಾರರು ಕೈ ಪಕ್ಷದ ಪೋಸ್ಟ್ ಮಾರ್ಟಮ್ ಮಾಡಿದ್ದಾರೆ. ಕಾಂಗ್ರೆಸ್ಸಿಗರೇ.. ಅನ್ಯರ ಬಗ್ಗೆ ಹಗುರವಾಗಿ ಮಾತಾನಾಡುವ ನಿಮ್ಮ ಹರಕು ಬಾಯಿಗಳಿಗೆ, ನಿಮ್ಮ ತೂತುಬಿದ್ದ ಮಡಿಕೆಯಂತಾಗಿರುವ ನಿಮ್ಮ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ. 288 ಸೀಟುಗಳ ಮಹಾರಾಷ್ಟ್ರದಲ್ಲಿ ಹದಿನಾರೇ ಸೀಟಿಗೆ ಬೋರಲು ಬಿದ್ದ ಸೋಕಾಲ್ಡ್ ನ್ಯಾಷನಲ್ ಪಾರ್ಟಿ ನಾಯಕರೇ, ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ. ಇನ್ನು ಜಾರ್ಖಂಡ್; ಜೆಎಂಎಂ ಪರಾವಲಂಬಿಯಾಗಿ ಪರದೇಸಿ ಬಾಳ್ವೆ ಮಾಡಿಕೊಂಡು 81 ಸೀಟಿನ ಪೈಕಿ ಹದಿನಾರಕ್ಕೆ ಅಡ್ಡಡ್ಡ ಬಿದ್ದ ನಿಮ್ಮ ಪಕ್ಷಕ್ಕೆ ಅಲ್ಲಿಯೂ ಜನ ಚಟ್ಟ ಕಟ್ಟಿದ್ದಾರೆ. ಸರಳ ಲೆಕ್ಕ ಕಾಂಗ್ರೆಸ್ಸಿಗರೇ.. 288+81=369. ಇಷ್ಟರಲ್ಲಿ ಒಟ್ಟು ಎಷ್ಟು ಗೆದ್ದಿದ್ದೀರಿ? ಕೇವಲ.. ಕೇವಲ.. 32!! ಅದರಲ್ಲಿಯೂ ಮಹಾರಾಷ್ಟ್ರದಲ್ಲಿ -28!! ಛೀ.. ನಿಮ್ಮ ಜನ್ಮಕ್ಕೆ.. ನಿಮಗಿಂತ ನಾವು ಕಳಪೆಯೇ..? 224 ಕ್ಷೇತ್ರಗಳಲ್ಲಿ 19 ಗೆದ್ದಿದ್ದೆವು. ಅದೂ ಯಾವ ಮೈತ್ರಿಯೂ ಇಲ್ಲದೆ!! ನಾವು ಪ್ರಾದೇಶಿಕ, ನೀವು ಸೋಕಾಲ್ಡ್ ನ್ಯಾಶನಲ್ ಎಂದು ಜೆಡಿಎಸ್ ಲೇವಡಿ ಮಾಡಿದೆ.

ಐರೆನ್ ಲೆಗ್ ಪಾರ್ಟಿ ಕಾಂಗ್ರೆಸ್, ಮಹಾರಾಷ್ಟ್ರದಲ್ಲಿ ಮೈತ್ರಿ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸಿದೆ. ಅದಕ್ಕೆ ಬಲಿಯಾದ ಪಕ್ಷ ಉದ್ಧವ್ ಠಾಕ್ರೆಯವರ ಶಿವಸೇನೆ!! ಮೈತ್ರಿಗೆ, ಮೈತ್ರಿ ಪಕ್ಷಗಳಿಗೆ ಮಿತ್ರದ್ರೋಹ ಮಾಡುತ್ತಿರುವ ಕಾಂಗ್ರೆಸ್ ಸಂವಿಧಾನವನ್ನೇ ಅಣಕಿಸುತ್ತಿದೆ. ಅನ್ಯರ ಅಣಕವೇ ಮನೆಹಾಳು ಕಾಂಗ್ರೆಸ್ಸಿನ ಕಾಯಕ ಎಂದು ವ್ಯಂಗ್ಯವಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ