ಯತೀಂದ್ರ ಸಿದ್ದರಾಮಯ್ಯ  
ರಾಜಕೀಯ

ಸಿದ್ದರಾಮಯ್ಯ ಐದು ವರ್ಷ ಸಿಎಂ ಹುದ್ದೆಯಲ್ಲಿರುತ್ತಾರೆ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬಿಜೆಪಿಯು ಸಿದ್ದರಾಮಯ್ಯನವರ ಇಮೇಜ್ ಗೆ ಹಾನಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಕೊಂದು ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.

ಮೈಸೂರು: ಇತ್ತೀಚೆಗಷ್ಟೇ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆದ್ದುಕೊಂಡಿದ್ದು, ತಮ್ಮ ತಂದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಿಲ್ಲ. ಪೂರ್ಣ ಐದು ವರ್ಷಗಳ ಅವಧಿಗೆ ಅಧಿಕಾರದಲ್ಲಿ ಇರುತ್ತಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುವ ಮೂಲಕ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ವಾಗ್ದಾಳಿ ನಡೆಸಿದ ಯತೀಂದ್ರ, ಬಿಜೆಪಿಯು ಸಿದ್ದರಾಮಯ್ಯನವರ ಇಮೇಜ್ ಗೆ ಹಾನಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಕೊಂದು ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ ಎಂದರು.

ಸಿಎಂ ರಾಜೀನಾಮೆಗೆ ಯಾವುದೇ ಕಾರಣವಿಲ್ಲ, ಅವರು ಯಾವುದೇ ತಪ್ಪು ಮಾಡಿಲ್ಲ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದ ಯತೀಂದ್ರ ಸಿದ್ದರಾಮಯ್ಯ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಜನತೆಗೆ ಕೃತಜ್ಞತೆಗಳು, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಮೂರೂ ಸ್ಥಾನಗಳನ್ನು ಗಳಿಸಿದ್ದು ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.

ಹಾಸನದಲ್ಲಿ ರ್ಯಾಲಿ ಆಯೋಜಿಸುವುದನ್ನು ವಿರೋಧಿಸಿ ಪತ್ರ ಬರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತೀಂದ್ರ, ಸಿದ್ದರಾಮಯ್ಯ ಅವರ ಮುಂದಾಳತ್ವದಲ್ಲಿ ಡಿಸೆಂಬರ್ 5 ರಂದು ಶೋಷಿತ ವರ್ಗಗಳ ಸಮಾವೇಶವನ್ನು ಆಯೋಜಿಸಲು ಪಕ್ಷ ಒಪ್ಪಿಗೆ ನೀಡಿದೆ. ಇದು ನಕಲಿ ಪತ್ರವಾಗಿರಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಆರೋಪ ಹೊರಿಸುವ ಷಡ್ಯಂತ್ರದ ವಿರುದ್ಧ ಮೈಸೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿತ್ತು. ಹಾಸನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

SCROLL FOR NEXT