ಚನ್ನಪಟ್ಟಣದಲ್ಲಿ ಡಿಕೆ.ಶಿವಕುಮಾರ್. 
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ದಿನಾಂಕ ಘೋಷಣೆಗೂ ಮುನ್ನವೇ ಗರಿಗೆದರಿದ ರಾಜಕೀಯ ಚಟುವಟಿಕೆ

ಕೇಂದ್ರ ಸಚಿವ ಮತ್ತು ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ನವದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಡಾ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡಸಿದ್ದಾರೆ.

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ (ಇಸಿಐ) ಇನ್ನೂ ಪ್ರಕಟಿಸದಿದ್ದರೂ, ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಶಳ ಚಟುವಟಿಕೆಗಳು ಗರಿಗೆದರಿವೆ.

ಕೇಂದ್ರ ಸಚಿವ ಮತ್ತು ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ನವದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಡಾ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡಸಿದ್ದಾರೆ.

ಈ ನಡುವೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಚನ್ನಪಟ್ಟಣ ಕ್ಷೇತ್ರಕ್ಕೆ 300 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಘೋಷಣೆ ಮಾಡಿ, ರಾಜಕೀಯ ಚಟುವಟಿಕೆ ಆರಂಭಿಸಿದ್ದಾರೆ.

ಚನ್ನಪಟ್ಟಣದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ್ದ ಡಿಕೆ.ಶಿವಕುಮಾರ್ ಅವರು. ಇನ್ನೊಂದು ವಾರದಲ್ಲಿ ಉಪಚುನಾವಣೆಯ ದಿನಾಂಕ ಪ್ರಕಟಗೊಳ್ಳುವ ಸಾಧ್ಯತೆಗಳಿವೆ. ಪ್ರಸ್ತುತ ನಾನು ಅಭ್ಯರ್ಥಿ ಬಗ್ಗೆ ಯೋಚಿಸುತ್ತಿಲ್ಲ. ನಮ್ಮ ಮತದಾರರು ನಾನೇ ಅಭ್ಯರ್ಥಿ ಎಂದು ಭಾವಿಸಿ ಮತ ಚಲಾಯಿಸುವಂತೆ ವಿನಂತಿಸುತ್ತಿದ್ದೇನೆ. ಅಭ್ಯರ್ಥಿಯ ಬದಲು ನನ್ನ ಮುಖ ನೋಡಿ ಮತ ಹಾಕುವಂತೆ ಮತದಾರರಲ್ಲಿ ವಿನಂತಿಸುತ್ತೇನೆಂದು ಮನವಿ ಮಾಡಿದ್ದರು.

ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ 5,000 ಮನೆಗಳನ್ನು ವಿತರಿಸಿದ್ದು, ಪ್ರತಿ ಗ್ರಾಮ ಪಂಚಾಯಿತಿ 100-150 ಮನೆಗಳನ್ನು ಪಡೆಯುತ್ತಿದೆ. ಚನ್ನಪಟ್ಟಣ ತಾಲೂಕಿನ ಪ್ರತಿ ಪಂಚಾಯಿತಿಯಲ್ಲಿ 2-5 ಕೋಟಿ ರೂ.ಗಳ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕುಮಾರಸ್ವಾಮಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಚನ್ನಪಟ್ಟಣ ಹಿಂದಿನಿಂದಲೂ ಜೆಡಿಎಸ್​ ಭದ್ರಕೋಟೆಯಾಗಿದೆ. ಜೆಡಿಎಸ್'ನ ಈ ಭದ್ರಕೋಟೆಯಲ್ಲಿ ಕುಮಾರಸ್ವಾಮಿ ಹಾಗೂ ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿದೆ.

ಬಲ್ಲ ಮೂಲಗಳ ಪ್ರಕಾರ, ಕುಮಾರಸ್ವಾಮಿ ಅವರು ತಮ್ಮ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ಮುಖ್ಯಸ್ಥ ನಿಖಿಲ್ ಅವರನ್ನು ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ಈ ವಿಚಾರವಾಗಿಯೇ ಅಗರ್ವಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಬಿಜೆಪಿ ಜೊತೆಗಿನ ಒಪ್ಪಂದದ ಪ್ರಕಾರ ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಬೇಕಿದೆ ಎಂದು ಮೂಲವೊಂದು ತಿಳಿಸಿವೆ.

ನಿಖಿಲ್ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಮೂಲಗಳು ಹೇಳಿದ್ದರೂ, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಪಕ್ಷದ ಕೆಲ ನಾಯಕರು ಹೇಳಿದ್ದಾರೆ.

ಇನ್ನು ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಿವಕುಮಾರ್ ಅವರ ಕಿರಿಯ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿಕೆ ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇನ್ನು ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು, ಕುಮಾರಸ್ವಾಮಿ ಅವರು ಇದಕ್ಕೆ ಒಪ್ಪಿಕೊಳ್ಳಲು ಸಿದ್ಧರಿಲ್ಲ ಎನ್ನಲಾಗುತ್ತಿದೆ.

ಈ ಹಿಂದೆ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಉರುಳಿಸಲು ಕಾರಣರಾದವರಿಗೆ ಟಿಕೆಟ್ ನೀಡಿ ನೀಡಿ, ಹೇಗೆ ಕಣಕ್ಕಿಳಿಸಲು ಸಾಧ್ಯ ಎಂದು ಜೆಡಿಎಸ್ ಮುಖಂಡರೊಬ್ಬರು ಪ್ರಶ್ನಿಸಿದ್ದಾರೆ.

ಈ ನಡುವೆ ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ಕಡಿಮೆಯಿದೆ ಎನ್ನಲಾಗುತ್ತಿದ್ದು, ಕೊನೆ ಗಳಿಗೆಯಲ್ಲಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಸೇರ್ಪಡೆಗೊಳಿಸುವುದೇ ಎಂಬುದನ್ನು ಕಾದು ನೋಡಬೇಕಾಗಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT