ಬಿ.ಕೆ ಹರಿಪ್ರಸಾದ್ 
ರಾಜಕೀಯ

'ಜಾತಿಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ, ಆದರೆ ವರದಿ ಜಾರಿಗೆ ತನ್ನಿ': ಸರ್ಕಾರಕ್ಕೆ ಹೊಸ ತಲೆನೋವು ತಂದ BK Hariprasad!

ಜಾತಿಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ. ಸರ್ಕಾರ ಏನಾಗತ್ತೋ ಆಗಲಿ ನೋಡೋಣ. ಸಿದ್ದರಾಮಯ್ಯನವರೇ ಜಾತಿ ಗಣತಿ ವರದಿಯನ್ನು ಮೊದಲು ಬಿಡುಗಡೆ ಮಾಡಿ ಎಂದು ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ತಲೆಬಿಸಿ ಮಾಡಿಕೊಂಡಿರುವ ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹೊಸ ತಲೆನೋವು ತಂದಿತ್ತಿದ್ದು, ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿದ್ದಾರೆ.

ಹೌದು.. ಜಾತಿಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದ್ರೆ ಹೋಗಲಿ. ಸರ್ಕಾರ ಏನಾಗತ್ತೋ ಆಗಲಿ ನೋಡೋಣ. ಸಿದ್ದರಾಮಯ್ಯನವರೇ ಜಾತಿ ಗಣತಿ ವರದಿಯನ್ನು ಮೊದಲು ಬಿಡುಗಡೆ ಮಾಡಿ ಎಂದು ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಸರ್ಕಾರ ಬರಲು ಶೋಷಿತ ಸಮುದಾಯಗಳೇ ಕಾರಣ. ಸರ್ಕಾರ ಬಿದ್ದರೆ ಬೀಳಲಿ. ಏಕೆ ಹೆದರಬೇಕು? ಜಾತಿಗಣತಿಯನ್ನ ಮೊದಲು ಬಿಡುಗಡೆ ಮಾಡಿ. ಜಾತಿಗಣತಿ ವರದಿ ಜಾರಿಗೆ ಬರಲಿ. ಜಾತಿಗಣತಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಇದೆ. ಆದರೆ ಸರ್ಕಾರ ಏಕೆ ಯೋಚನೆ ಮಾಡುತ್ತಿದೆ? ಮೊದಲು ಜಾತಿಗಣತಿ ಜಾರಿ‌ ಮಾಡಲಿ. ಎಲ್ಲ ಸಮುದಾಯಕ್ಕೆ ಅನುಕೂಲ ಇದೆ. ಜಾತಿಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅಂದರೆ ಹೋಗಲಿ ಎಂದು ಹೇಳಿದರು.

ರಾಹುಲ್ ಗಾಂಧಿ ಬಗ್ಗೆ ಗೌರವ ಇದ್ದವರು ಬೆಂಬಲಿಸುತ್ತಾರೆ: ಡಿಕೆ ಸುರೇಶ್ ಗೆ ಟಾಂಗ್!

ಇದೇ ವೇಳೆ ಜಾತಿಗಣತಿ ಜಾರಿ ಬಗ್ಗೆ ಸರ್ಕಾರ ಎಚ್ಚರದ ನಡೆ ಹಾಕಬೇಕು ಎಂಬ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಕೆ ಹರಿಪ್ರಸಾದ್, 'ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಣಾಳಿಕೆ ಬಗ್ಗೆ ಗೌರವ ಇರುವವರು ಬೆಂಬಲ ಕೊಡಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಜಾತಿಗಣತಿ ಜಾರಿ ಬಗ್ಗೆ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಹೇಳಿದ್ದರು.

ರಾಹುಲ್ ಗಾಂಧಿ ಹೇಳಿದ್ರು ಪ್ರಪಂಚ ಬಿದ್ರೂ ಜಾತಿಗಣತಿ ಜಾರಿಯಾಗಬೇಕು ಅಂತ. ಪ್ರಪಂಚ ತಲೆಕೆಳಗಾಗಲಿ, ಜಾತಿಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ರೆ ಬೀಳಲಿ, ಏಕೆ ಹೆದರಬೇಕು. ಸರ್ಕಾರಕ್ಕೆ ಕಂಟಕ ಎದುರಾದ್ರೆ ಆಗಲಿ. ಜಾತಿ ಗಣತಿ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಅಂತೆಯೇ 'ನಮ್ಮ ಸರ್ಕಾರ ಬಂದಿರೋದು ಅಧಿಕಾರ ಅನುಭವಿಸುವುದಕ್ಕಲ್ಲ, ಕಾಂಗ್ರೆಸ್ ಪ್ರಣಾಳಿಕೆ ಓದಿದವರು, ಕಾಂಗ್ರೆಸ್ ಪ್ರಣಾಳಿಕೆ ಮೇಲೆ ನಂಬಿಕೆ ಇರುವವರು ಜಾತಿಗಣತಿ ಬೆಂಬಲಿಸಲಿ' ಎಂದು ಹರಿಪ್ರಸಾದ್​ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

500 ಕೋಟಿ ರು ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ; ನವಜೋತ್ ಸಿಧು ಪತ್ನಿ ಹೇಳಿಕೆ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

SCROLL FOR NEXT