ಸಂಗ್ರಹ ಚಿತ್ರ 
ರಾಜಕೀಯ

ಮುಡಾ-ವಾಲ್ಮೀಕಿ ಹಗರಣಗಳಿಂದ ಪಕ್ಷದ ವರ್ಚಸ್ಸಿಗೆ ಕುತ್ತು: BJP ಹಣಿಯಲು 'ಕೈ' ಪಡೆ ಮಾಸ್ಟರ್ ಪ್ಲ್ಯಾನ್, ಹಳೇ ಕೇಸ್'ಗಳು ರೀಓಪನ್..!

ಸೇರಿಗೆ ಸವ್ವಾಸೇರು ಎಂಬಂತೆ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರ ಬಗ್ಗುಬಡಿಯಲು ಕಾಂಗ್ರೆಸ್ ಮುಂದಾಗಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಗರಣದ ತಾರ್ಕಿಕ ಅಂತ್ಯ ಕುರಿತಾದ ಕುತೂಹಲ ಹೆಚ್ಚುತ್ತಿರುವ ಬೆನ್ನಲ್ಲೇ, ರಾಜಕೀಯ ಸಂಘರ್ಷದ ವಾತಾವರಣವೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಸೇರಿಗೆ ಸವ್ವಾಸೇರು ಎಂಬಂತೆ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರ ಬಗ್ಗುಬಡಿಯಲು ಕಾಂಗ್ರೆಸ್ ಮುಂದಾಗಿದೆ.

ಇದರಂತೆ ಬಿಜೆಪಿ ನಾಯಕರ ವಿರುದ್ಧದ ಹಳೇ ಪ್ರಕರಣಗಳ ಕೆದಕಲು ಆಡಳಿತಾರೂಢ ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸುತ್ತಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷದ ಕಾನೂನು ವಿಭಾಗ ಮೂರು ಸುತ್ತಿನ ಸಭೆ ನಡೆಸಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ನೇತೃತ್ವದಲ್ಲಿ ಈ ಸಬೆ ನಡೆದಿದ್ದು, ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್, ಪ್ರತಿಪಕ್ಶ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್'ಡಿ.ಕುಮಾರಸ್ವಾಮಿ ವಿರುದ್ದಧ ಡಿನೋಟಿಫಿಕೇಶನ್ ಪ್ರಕರಣ ಕುರಿತು ಚರ್ಚೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಬಿಜೆಪಿ ಹಿರಿಯ ಮುಖಂಡ, ಎಂಎಲ್‌ಸಿ ಸಿಟಿ ರವಿ ಸೇರಿದಂತೆ ಬಿಜೆಪಿಯ 22 ಪ್ರಬಲ ನಾಯಕರ ವಿರುದ್ಧದ ಭೂ ವಿವಾದ ಪ್ರಕರಣಗಳನ್ನು ಬೆಳಕಿಗೆ ತರಲಾಗುವುದು ಎಂದು ಕಾನೂನು ಘಟಕದ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.

ಸೋಮವಾರ ಕೂಡ ಕಾಂಗ್ರೆಸ್ ನಾಯಕರು ಪೊನ್ನಣ್ಣ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಸಿದ್ದು, ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಏಕೆ ವಿಫಲವಾಗಿದೆ ಎಂಬುದೂ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT