ಕೆ ಎಸ್ ಈಶ್ವರಪ್ಪ  
ರಾಜಕೀಯ

ರಾಷ್ಟ್ರದ್ರೋಹಿ ಮುಸ್ಲಿಮರ ವಿರುದ್ಧ ಹೋರಾಡಲು ಹೊಸ ಸಂಘಟನೆ: ಕೆ ಎಸ್​ ಈಶ್ವರಪ್ಪ

30–40 ಜನ ಸಾಧು ಸಂತರು ಇಂತಹ ಸಂಘಟನೆಯೊಂದನ್ನು ರಚಿಸುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆ ಮೇರೆಗೆ ಸಂಘಟನೆ ರಚಿಸಲು ಮುಂದಾಗಿದ್ದೇವೆ. ಈ ಸಂಘಟನೆಯು ರಾಜಕೀಯೇತರವಾಗಿದೆ.

ಹುಬ್ಬಳ್ಳಿ: ದಲಿತರು ಹಾಗೂ ಹಿಂದುಳಿದ ವರ್ಗದವರ ಮೇಲೆ ರಾಷ್ಟ್ರದ್ರೋಹಿ ಅಲ್ಪಸಂಖ್ಯಾತರಿಂದ ಆಗುತ್ತಿರುವ ಅನ್ಯಾಯವನ್ನು ತಡೆಯಲು ಸಂಘಟನೆಯೊಂದನ್ನು ರಚಿಸುವ ಬಗ್ಗೆ ಚರ್ಚಿಸಲು ಬಾಗಲಕೋಟೆಯಲ್ಲಿ ಅ.20ರಂದು ಬೆಳಿಗ್ಗೆ 11ಕ್ಕೆ ಸಭೆ ಕರೆಯಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಸೋಮವಾರ ಇಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆ ರಚಿಸುವ ಸಂಬಂಧ ಉತ್ತರ ಕರ್ನಾಟಕದ ಹಲವು ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದೇವೆ. ಮಾಜಿ ಸಂಸದ ವಿರೂಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌, ಮಾಜಿ ಶಾಸಕರಾದ ರಘುಪತಿ ಭಟ್‌, ವೀರಭದ್ರಪ್ಪ ಹಾಲಹರವಿ, ಅಹಿಂದ ಸಂಘಟನೆಯ ನಾಯಕ ಮುಕುಡಪ್ಪ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿ, ಅಭಿಪ್ರಾಯ ತಿಳಿಸಿದ್ದಾರೆ ಎಂದರು. ‘30–40 ಜನ ಸಾಧು ಸಂತರು ಇಂತಹ ಸಂಘಟನೆಯೊಂದನ್ನು ರಚಿಸುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆ ಮೇರೆಗೆ ಸಂಘಟನೆ ರಚಿಸಲು ಮುಂದಾಗಿದ್ದೇವೆ. ಈ ಸಂಘಟನೆಯು ರಾಜಕೀಯೇತರವಾಗಿದೆ. ಇದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸಂಘಟನೆಯ ಹೆಸರನ್ನು ಇನ್ನೂ ನಿಗದಿ ಮಾಡಿಲ್ಲ. ‘ರಾಯಣ್ಣ– ಚನ್ನಮ್ಮ ಬ್ರಿಗೇಡ್‌’ ಎಂದು ನಾಮಕರಣ ಮಾಡುವಂತೆ ಕೆಲವರು ಸಲಹೆ ನೀಡಿದ್ದಾರೆ. ಬಾಗಲಕೋಟೆಯ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಹಿಂದೆ ರಾಯಣ್ಣ ಬ್ರಿಗೇಡ್ ಕಟ್ಟಿದಾಗ, ಜನ ಬೆಂಬಲ ಸಿಕ್ಕಿತ್ತು. ಆದರೆ, ಬಿ ಎಸ್​ ಯಡಿಯೂರಪ್ಪ ಅವರಿಗೆ ಸಹಿಸಿಕೊಳ್ಳಲು ಆಗದೆ ಅಮಿತ್ ಶಾ ಅವರಿಗೆ ದೂರು ಕೊಟ್ಟರು. ದೂರು ಕೊಡಲು ಕಾರಣವೇನು ಎಂದು ಬಿ ಎಸ್​ ಯಡಿಯೂರಪ್ಪ ಅವರು ಕಾರಣ ಹೇಳಿಲ್ಲ. ಸಂಘಟನೆ ಬೇಡಾ ಅಂತ ಮಾತ್ರ ಹೇಳಿದರು. ಅವತ್ತು ನಾನು ತಪ್ಪು ಮಾಡಿದೆ. ರಾಯಣ್ಣ ಬ್ರಿಗೇಡ್ ಇರಬೇಕಿತ್ತು” ಎಂದರು. ಅಪ್ಪ ಮಕ್ಕಳ ಹೊಂದಾಣಿಕೆಯಿಂದ ಬಿಜೆಪಿ ಮುಕ್ತಿಯಾಗಬೇಕು. ಬಿಜೆಪಿ ಶುದ್ಧೀಕರಣವಾಗಲು ಚುನಾವಣೆ ನಿಂತಿದ್ದೆ. ನಾನು ಬಿಜೆಪಿ ಸೇರಲ್ಲ, ನನಗೆ ಸಮಾಧಾನ ಆದರೆ ಮಾತ್ರ ವಾಪಸ್ ಬಿಜೆಪಿ ಸೇರುತ್ತೇನೆ. ನನ್ನ ಮಗನಿಗೆ ಹಾವೇರಿಗೆ ಟಿಕೆಟ್ ಕೊಡಿಸುತ್ತೇನೆ ಅಂತ ಹೇಳೆ​ ಯಡಿಯೂರಪ್ಪ ಮೋಸ ಮಾಡಿದರು ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

SCROLL FOR NEXT