ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಇನ್ನೊಂದು ವಾರದಲ್ಲಿ ಉಪಚುನಾವಣೆಗೆ​ ದಿನಾಂಕ ಘೋಷಣೆ: ಎಚ್.ಡಿ ಕುಮಾರಸ್ವಾಮಿ

ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್​ ಸಭೆಯಲ್ಲಿ​ ಮಾತನಾಡಿದ ಅವರು, ಕಾರ್ಯಕರ್ತರು, ಜನರ ನಾಡಿಮಿಡಿತ ಅರ್ಥ ಮಾಡಿಕೊಳ್ಳಬೇಕು ಎಂದರು.

ಚನ್ನಪಟ್ಟಣ: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಾಗಿ ಇನ್ನೊಂದು ವಾರದಲ್ಲಿ ದಿನಾಂಕ ಘೋಷಣೆ ಆಗಲಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್​ ಸಭೆಯಲ್ಲಿ​ ಮಾತನಾಡಿದ ಅವರು, ಕಾರ್ಯಕರ್ತರು, ಜನರ ನಾಡಿಮಿಡಿತ ಅರ್ಥ ಮಾಡಿಕೊಳ್ಳಬೇಕು. ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ಬಿಜೆಪಿ ವರಿಷ್ಠರ ಜೊತೆ ಚರ್ಚೆ ಮಾಡಿ ಅಭ್ಯರ್ಥಿ ಯಾರಾಗಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾವು ಕಳೆದ ಎರಡು ಚುನಾವಣೆಯನ್ನ ನಿರಂತರವಾಗಿ ಈ ಕ್ಷೇತ್ರದಿಂದ ಗೆದ್ದಿದ್ದೇವೆ. ಈ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸಕ್ಕೆ ತೆಗೆದುಕೊಳ್ಳದೇ ನಾನು ಯಾವುದೇ ನಿರ್ಣಯ ಮಾಡುವುದಿಲ್ಲ. 2013ರಲ್ಲೂ ಕೇವಲ 3 ಸಾವಿರ ಮತಗಳಲ್ಲಿ ಸೋತಿದ್ದೇವೆ. 2018 ಹಾಗೂ 2023ರಲ್ಲಿ ನಿರಂತರವಾಗಿ ಗೆದ್ದಿದ್ದೇವೆ. ಮೊದಲಿನಿಂದಲೂ ಇದು ಜನತಾದಳದ ಭದ್ರಕೋಟೆ ಎಂದಿದ್ದಾರೆ.

ನಮ್ಮಲ್ಲಿನ ಕೆಲವೊಂದಷ್ಟು ತಿಕ್ಕಾಟಕ್ಕೆ ಸಂಘಟನೆ ಸ್ವಲ್ಪ ವೀಕ್ ಆಗಿದೆ. ಈಗ ಕಾರ್ಯಕರ್ತರು ಬಲಾಡ್ಯವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅದರಿಂದ ಅವರ ವಿಶ್ವಾಸ ಇಲ್ಲದೇ ಏನು ತೀರ್ಮಾನ ಮಾಡಲ್ಲ. ಅವರ ಪಕ್ಷದಲ್ಲಿ ಅವರು ಏನೇ ಚರ್ಚೆ ಮಾಡಿಕೊಂಡರೂ ಅದು ಅವರ ಸಂಘಟನೆ ವಿಚಾರ. ಅದನ್ನ ತಪ್ಪು ಅಂತ ನಾವು ಹೇಳುವುದಿಲ್ಲ ಎಂದರು.

ಕೋವಿಡ್ ಹಗರಣ ತನಿಖೆಗೆ ಎಸ್ಐಟಿ ರಚನೆಯ ಭಜನೆ ಒಂದುವರೆ ವರ್ಷದಿಂದ ನಡೆಯುತ್ತಿದೆ. ಇವರುಗಳು ವಿರೋಧ ಪಕ್ಷದಲ್ಲಿ ಕೆಲಸ ಮಾಡುವಾಗ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದರು. ಪಿಎಸಿಎಲ್ ಚೇರ್ಮನ್ ಅವರ ಪಕ್ಷದವರೇ ಇದ್ದಾರೆ. ಇಲ್ಲಿಯವರೆಗೆ ಯಾವುದೇ ರೀತಿಯ ತನಿಖೆ ಮಾಡಿಲ್ಲ. ಈಗ ಏಕೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್