ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

2028ಕ್ಕೆ ಮುಖ್ಯಮಂತ್ರಿಯಾಗುವ ಬಯಕೆ ಇದೆ: ಸಚಿವ ಸತೀಶ್ ಜಾರಕಿಹೊಳಿ

ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಪಿ. ಕೋಳಿವಾಡ್ ಹೇಳಿರುವುದು ಅವರ ವೈಯುಕ್ತಿಕ ಹೇಳಿಕೆ ಅಷ್ಟೇ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಹಾಸನ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ವಿಪಕ್ಷಗಳು ವ್ಯಾಪಕ ಹೋರಾಟ ಮಾಡುತ್ತಿರುವಂತೆಯೇ ಇತ್ತ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, 'ಮುಖ್ಯಮಂತ್ರಿಯಾಗುವ ಬಯಕೆ ಇದೆ' ಎಂದು ಹೇಳಿದ್ದಾರೆ.

ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ಮುಖ್ಯಮಂತ್ರಿ ಸಿದ್ಧರಾಮಯ್ಯ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಅವರ ಬದಲಾವಣೆ ಊಹಾಪೋಹಾ.. ಅಷ್ಟೇ ಆದರೆ ನಾನು 2028ಕ್ಕೆ ಮುಖ್ಯಮಂತ್ರಿಯಾಗುವ ಬಯಕೆ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.

'ನನ್ನ ಹಲವು ಹಿತೈಷಿಗಳು ನಾನೇ ಮುಂದಿನ ಸಿಎಂ ಎಂದು ಹೇಳಿದ್ದಾರೆ. ಆ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲ್ಲ. ನಾನು ಸಿಎಂ ಆಗುವುದು ಸಿದ್ಧರಾಮಯ್ಯ ಅವರ ಅವಧಿ ಮುಗಿದ ನಂತರವೇ. ಅದು ಸಿದ್ಧರಾಮಯ್ಯನವರ ಸಹಕಾರದಿಂದಲೇ ಸಿಎಂ ಆಗುತ್ತೇನೆ. ಇದೇ ಅಭಿಪ್ರಾಯವನ್ನು ನನ್ನ ಮಗಳು ಸಂಸದೆ ಪ್ರಿಯಾಂಕ ಜಾರಕಿಹೊಳಿ ಸಹ ವ್ಯಕ್ತಪಡಿಸಿದ್ದಾರೆ. 2028ರವರೆಗೂ ಕಾಯೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಅಂತೆಯೇ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, 'ಸಿದ್ಧರಾಮಯ್ಯ ಅವರ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸಹ ಹೇಳಿದೆ. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹಾ ಸಿದ್ಧರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದರು.

ಕೋಳಿವಾಡ ಹೇಳಿಕೆ ಅವರ ವೈಯುಕ್ತಿಕ

ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಪಿ. ಕೋಳಿವಾಡ್ ಹೇಳಿರುವುದು ಅವರ ವೈಯುಕ್ತಿಕ ಹೇಳಿಕೆ ಅಷ್ಟೇ ಎಂದು ಹೇಳಿದ ಸತೀಶ್ ಜಾರಕಿಹೊಳಿ, 'ಜಾತಿ ಗಣತಿ ವಿಚಾರ ಸಚಿವ ಸಂಪುಟದಲ್ಲಿ ಇನ್ನೂ ಚರ್ಚೆಗೆ ಬಂದಿಲ್ಲ. ಸಚಿವ ಸಂಪುಟದ ಮುಂದೆ ಈ ವಿಚಾರ ಬಂದ ನಂತರ ಈ ಬಗ್ಗೆ ಮಾತನಾಡೋಣ. ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು ಎಂಬ ಕೂಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲೇ ಈ ಭರವಸೆ ನೀಡಿದೆ. ಅದನ್ನು ಈಡೇರಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT