ಬಿಜೆಪಿ online desk
ರಾಜಕೀಯ

ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ: ಸರ್ಕಾರದ ಜಾಹಿರಾತಿಗೆ BJP ಟಾಂಗ್

ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ.

ಬೆಂಗಳೂರು: ನೀವು ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ ಎಂದು ರಾಜ್ಯ ಸರ್ಕಾರದ ಜಾಹೀರಾತಿಗೆ ಬಿಜೆಪಿ ಟಾಂಗ್ ನೀಡಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ ಎಂದು ಕಿಡಿಕಾರಿದೆ.

ಆರೋಪಿ ಸಿದ್ದರಾಮಯ್ಯ ಅವರೇ, ಈ ರೀತಿ ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ. ರಾಮ ಸತ್ಯನೇ, ಆದರೆ ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳು. ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದ. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಸಿಎಂ ಪದವಿಗೆ ರಾಜೀನಾಮೆ ಸಲ್ಲಿಸಿ ಸತ್ಯಶೋಧನೆಗೆ ಅವಕಾಶ ನೀಡಿ ಎಂದು ಹೇಳಿದೆ.

ದಸರಾ ಹಬ್ಬ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯವನ್ನು ವಾಮಮಾರ್ಗ ಮತ್ತು ಮೋಸದಿಂದ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ನಿಗ್ರಹಿಸಿ, ನಾಡವಾಸಿಗಳಿಗೆ ಸುಖ-ಶಾಂತಿಯನ್ನು ಕರುಣಿಸಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆ

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಹಾರ್ಮುಜ್ ಜಲಸಂಧಿ ಬಳಿ ದಾಳಿ: ಭಾರತ ಕಡೆಗೆ ಹೊರಟ್ಟಿದ್ದ ಥಾಯ್ ಕಾರ್ಗೋ ಹಡಗಿನಲ್ಲಿ ಬೆಂಕಿ, ಕಪ್ಪು ಹೊಗೆ! ಹೊಣೆ ಹೊತ್ತ ಇರಾನ್

SCROLL FOR NEXT