ಸಂಗ್ರಹ ಚಿತ್ರ 
ರಾಜಕೀಯ

ನಿಮಗೊಂದು ಕಾನೂನು, ನನಗೊಂದು ಕಾನೂನಾ? ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ: ಸಿದ್ದರಾಮಯ್ಯಗೆ ಈಶ್ವರಪ್ಪ ಆಗ್ರಹ

ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಸಿದ್ದರಾಮಯ್ಯ, ದೇವಸ್ಥಾನ ಧ್ವಂಸ ಮಾಡುವವರ ಮೇಲಿನ ಕೇಸ್ ಹಿಂಪಡೆದಿರುವುದು ದುರಾದೃಷ್ಟಕರ ಸಂಗತಿ.

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಸೋಮವಾರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೊಂದು ಕಾನೂನು, ನನಗೊಂದು ಕಾನೂನಾ?...ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಾಗ ನಾವೂ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದೆವು. ಇದೀಗ ನೀವೂ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದರು.

ನನ್ನ ಮೇಲೆ ಆರೋಪ ಕೇಳಿ ಬಂದಾಗಲೂ ರಾಜೀನಾಮೆ ನೀಡಿದ್ದೆ. ಸಿದ್ದರಾಮಯ್ಯ ಕೂಡ ಈಗ ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ನನ್ನ ಮೇಲೆ ತನಿಖೆ ಆಗಿತ್ತು. ಕ್ಲಿನ್ ಚಿಟ್ ಕೂಡ ಸಿಕ್ಕಿತ್ತು. ಈಗ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿ ಬಂದಿದೆ. ಈಗೇಕೆ ರಾಜೀನಾಮೆ ನೀಡುತ್ತಿಲ್ಲ?... ನಿಮಗೊಂದು ಕಾನೂನು ನನಗೊಂದು ಕಾನೂನು ಇದೆಯಾ? ನನ್ನ ವಿರುದ್ಧ ನೀವೇ ಹೋರಾಟ ಮಾಡಿದ್ದಿರಿ. ಸಿಎಂ ಡಬಲ್ ಸ್ಟ್ಯಾಂಡ್ ತಕೋಬೇಡಿ. ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ. ಕ್ಲಿನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಿ ಎಂದು ಹೇಳಿದರು.

ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಂಪತಿ ಆಗಾಗ ಭೇಟಿ ನೀಡುತ್ತಿದ್ದು, ಸವದತ್ತಿ ಯೆಲ್ಲಮ್ಮ ದೇವಸ್ಥಾನಕ್ಕೂ ಭೇಟಿ ನೀಡುತ್ತಿದ್ದಾರೆ. ಪಾರ್ವತಮ್ಮನವರ ಹೆಸರಿನಲ್ಲಿ ಪೂಜೆ ಸಲ್ಲಿಸಿ ಹಣೆಗೆ ಕುಂಕುಮ ಇಟ್ಟುಕೊಂಡಿದ್ದಾರೆ. ಮೇಲಿಂದ ಮೇಲೆ ಚಾಮುಂಡೇಶ್ವರಿ ಬೆಟ್ಟಕ್ಕೆ ಪೂಜೆ ಸಲ್ಲಿಸುವ ಕೆಲಸ ಆಗುತ್ತಿದೆ. ನಿಮ್ಮ ಶ್ರೀಮತಿಯವರು ಸಾಕಷ್ಟು ಪೂಜೆ ಮಾಡಿಕೊಂಡು ಬಂದಿದ್ದಾರೆ. ನೀವು ಕೂಡ ಪ್ರಾಮಾಣಿಕವಾಗಿ ಪೂಜೆ ಸಲ್ಲಿಸಿ, ಕುಂಕುಮ ಹಾಕಿಕೊಳ್ಳುವ ಕೆಲಸ ಮಾಡಿದ್ದೀರಾ. ಆದರೆ, ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಸಿದ್ದರಾಮಯ್ಯ, ದೇವಸ್ಥಾನ ಧ್ವಂಸ ಮಾಡುವವರ ಮೇಲಿನ ಕೇಸ್ ಹಿಂಪಡೆದಿರುವುದು ದುರಾದೃಷ್ಟಕರ ಸಂಗತಿ ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಓಲೈಕೆಯೇ ಈ ನಿರ್ಧಾರಗಳಿಗೆ ಕಾರಣವಾಗಿದ್ದು, ಕಾಂಗ್ರೆಸ್‌ನ ವೋಟ್ ಬ್ಯಾಂಕ್ ರಾಜಕಾರಣವನ್ನು ಪೋಷಿಸಲು ದೇಶವಿರೋಧಿಗಳು ಮತ್ತು ಭಯೋತ್ಪಾದಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಆರೆಸ್ಸೆಸ್ ಅನ್ನು ಟೀಕಿಸುತ್ತಾರೆ. ದೇಶದ ರಕ್ಷಣೆ ದೇಶ ಸೇವೆ ಮಾಡುತ್ತಿರುವುದು ಆರ್ ಎಸ್ಎಸ್. ಈ ಆರ್'ಎಸ್ಎಸ್ ಬಗ್ಗೆ ಟೀಕೆ ಮಾಡಿ ಮಾಡಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಂಗೊಳ್ಳಿ ರಾಯಣ್ಣ ಚನ್ನಮ್ಮ ಬ್ರಿಗೇಡ್ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಅಂತಿಮವಾದ ತೀರ್ಮಾನ ಇನ್ನು ಆಗಿಲ್ಲ. ಬಾಗಲಕೋಟೆಯಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಈ ಸಮಾವೇಶಕ್ಕೆ ಮೃತ್ಯುಂಜಯ ಸ್ವಾಮಿ ಸೇರಿದಂತೆ ಹಲವರು ಬರುತ್ತಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್