ಡಿಕೆ ಸುರೇಶ್ 
ರಾಜಕೀಯ

ಇಡಿ ದಾಳಿ ಬೆದರಿಕೆ ತಂತ್ರ, ಇದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯ ಹೆದರಲ್ಲ: ಡಿಕೆ ಸುರೇಶ್

ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಇಡಿ ದಾಳಿ ದುರುದ್ದೇಶ ಪೂರ್ವಕ. ಇದೊಂದು ರಾಜಕೀಯ ಪ್ರೇರಿತ ದಾಳಿ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ಒಂದು ಬೆದರಿಕೆ ತಂತ್ರ. ಇದಕ್ಕೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆದರುವುದಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಇಡಿ ದಾಳಿ ದುರುದ್ದೇಶ ಪೂರ್ವಕ. ಇದೊಂದು ರಾಜಕೀಯ ಪ್ರೇರಿತ ದಾಳಿ. ಕೇಂದ್ರ ಸರ್ಕಾರ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಡಿ ಐಟಿ ಸಿಬಿಐ ಕೇಂದ್ರ ಸರ್ಕಾರದ ರಾಜಕೀಯ ಅಸ್ತ್ರಗಳಾಗಿವೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಮಾಜಿ ಸಂಸದ, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಆರೋಪಮುಕ್ತರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಮುಡಾ ಕಚೇರಿಯಲ್ಲಿ 20ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಅವರ ಕೆಂಗೇರಿ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಡಿಗೆದಾರರಿಗೆ ಸಿಹಿ ಸುದ್ದಿ: ಕರ್ನಾಟಕ 'ಬಾಡಿಗೆ ತಿದ್ದುಪಡಿ ವಿಧೇಯಕ' 2025 ವಿಧಾನಸಭೆಯಲ್ಲಿ ಮಂಡನೆ!

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

Protection of personality rights: ಹೈಕೋರ್ಟ್ ಗೆ ಸಲ್ಮಾನ್ ಖಾನ್; ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಟ್ರೆಂಡ್ ಆಗ್ತಿರೋದೇಕೆ?

SCROLL FOR NEXT