ಬಿ ಎಸ್ ಯಡಿಯೂರಪ್ಪ  
ರಾಜಕೀಯ

ಚನ್ನಪಟ್ಟಣದಲ್ಲಿ ಜೆಡಿಎಸ್‌ನವರು ಯಾರಿಗೆ ಬೇಕೋ ಅವರಿಗೆ ಟಿಕೆಟ್ ನೀಡುತ್ತಾರೆ: ಬಿ ಎಸ್ ಯಡಿಯೂರಪ್ಪ

ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ನವ್ರು ಅನೌನ್ಸ್ ಮಾಡಿಕೊಳ್ಳಬಹುದು ಎಂದು ಅಮಿತ್ ಶಾ ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದ್ದು, ಇಂದೇ ಅಭ್ಯರ್ಥಿಯ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ.

ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ. ಅವರಿಗೆ ಯಾರು ಬೇಕೋ ಅವರ ಹೆಸರು ಘೋಷಣೆ ಮಾಡ್ತಾರೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಇಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಜೆಡಿಎಸ್‌ನವರು ಯಾರಿಗೆ ಬೇಕೋ ಅವರಿಗೆ ಟಿಕೆಟ್ ನೀಡುತ್ತಾರೆ. ಈಗಾಗಲೇ ಅಮಿತ್ ಶಾ ಅವರೂ ಚೆನ್ನಪಟ್ಟಣದಲ್ಲಿ ಜೆಡಿಎಸ್‌ನವ್ರು ಘೋಷಣೆ ಮಾಡ್ತಾರೆ ಅಂದಿದ್ದಾರೆ. ಚೆನ್ನಪಟ್ಟಣ ಜೆಡಿಎಸ್‌ ಕ್ಷೇತ್ರ, ಅವರಿಗೆ ಯಾರು ಬೇಕೋ ಅವರ ಹೆಸರು ಘೋಷಣೆ ಮಾಡಿಕೊಳ್ಳಲಿ ಎಂದರು.

ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ನವ್ರು ಅನೌನ್ಸ್ ಮಾಡಿಕೊಳ್ಳಬಹುದು ಎಂದು ಅಮಿತ್ ಶಾ ಹೇಳಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್‌ನವರೇ ಘೋಷಣೆ ಮಾಡ್ತಾರೆ. ಎರಡೂ ಪಕ್ಷಗಳೂ ಸೇರಿ ಮೂರೂ ಕ್ಷೇತ್ರ ಗೆಲ್ಲೋದಿಕ್ಕೆ ನಿರ್ಧಾರ ಆಗಿದೆ ಎಂದರು.

ಸಿ.ಪಿ.ಯೋಗೇಶ್ವರ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತೋ ಅದರಂತೆ ಆಗಲಿದೆ. ಜೆಡಿಎಸ್ ಚಿಹ್ನೆಯಡಿ ಬಿಜೆಪಿಯವರು ನಿಲ್ಲುವ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!