ನಿಶಾ ಮತ್ತು ಯೋಗೇಶ್ವರ್  
ರಾಜಕೀಯ

ಕುಟುಂಬದ ಎಲ್ಲಾ ಗುಟ್ಟು ರಟ್ಟು ಮಾಡುವೆ: ಸಿ.ಪಿ ಯೋಗೇಶ್ವರ್ ಇಮೇಜ್ ಡ್ಯಾಮೇಜ್ ಮಾಡಲು ಪಣ ತೊಟ್ಟ 'ನಿಶಾ'!

ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ' ಎಂದು ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವ‌ರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ' ಎಂದು ಹೇಳಿದ್ದಾರೆ.

ನನ್ನಿಂದ ಏನು ಸಮಸ್ಯೆ, ಏಕೆ ದ್ವೇಷ ತಿಳಿಯುತ್ತಿಲ್ಲ. ನಿಜವಾದ ಕಥೆ ಬೇರೆಯೇ ಇದೆ, ಸತ್ಯ ಬೇರೆಯೇ ಇದೆ. ಆ ಸತ್ಯವನ್ನು ಬೇಗ ಹೊರಗಡೆ ತರುತ್ತೇನೆ' ಎಂದಿದ್ದಾರೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಯೋಗೇಶ್ವರ್ ಹಾಗೂ ಪುತ್ರಿ ನಿಶಾ ಮಧ್ಯೆ ಕಳೆದ 4-5 ತಿಂಗಳಿಂದ ವೈಮನಸ್ಸು ಮೂಡಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಶಾ ಅವರು ತಂದೆ ಪರ ಪ್ರಚಾರ ನಡೆಸಿದರು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸಿದ್ದರು.

ಇದೀಗ ಪಕ್ಷೇತರವಾಗಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತಿರುವ ಸಿ.ಪಿ ಯೋಗೇಶ್ವರ ವಿರುದ್ಧ ಮಗಳೇ ತಿರುಗಿ ಬಿದ್ದಿದ್ದಾರೆ. ಕ್ಷೇತ್ರದಲ್ಲಿ ತಂದೆ ಇಮೇಜ್ ಡ್ಯಾಮೇಜ್ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಸದ್ಯ ಚುನಾವಣೆ ಸಂದರ್ಭವಾಗಿದ್ದರಿಂದ ಕಾಂಗ್ರೆಸ್‌ಗೆ ಅಪ್ಪ ಮಗಳ ಜಗಳ ವರದಾನವಾಗುವ ಸಾಧ್ಯತೆ ಇದೆ. ನನ್ನ ವಿರುದ್ಧ ನನ್ನ ತಂದೆ ಮತ್ತು ನಮ್ಮ ಚಿಕ್ಕಮ್ಮ ಶೀಲಾ ಯೋಗೇಶ್ವರ್ ಕುತಂತ್ರ ನಡೆಸಿ ನಾನು ಜನರ ಬಳಿ ಹೋಗುವುದನ್ನು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT