ಸಿ.ಟಿ ರವಿ 
ರಾಜಕೀಯ

ಯೋಗೇಶ್ವರ್‌ ಹುಲಿ ಬೋನಿಗೆ ಹೋಗಿದ್ದಾರೆ, ಹುಲಿ ಮಣಿಸ್ತಾರಾ? ಬಲಿಯಾಗ್ತಾರಾ? ಕಾದು ನೋಡಬೇಕು: ಸಿ.ಟಿ ರವಿ

ಡಿ.ಕೆ.ಶಿವಕುಮಾರ್‌ ಅವರಂತಹ ಪ್ರಬಲ ನಾಯಕರು ಹಾಗೂ 136 ಶಾಸಕರು ಇದ್ದರೂ ಯೋಗೇಶ್ವರ್‌ ಅವರಿಗೆ ಚುನಾವಣೆಗೆ ಟಿಕೆಟ್‌ ನೀಡುತ್ತಿದ್ದಾರೆ. ಇದು ಕಾಂಗ್ರೆಸ್ ತನ್ನ ದೌರ್ಬಲ್ಯವನ್ನು ಈಗಾಗಲೇ ಒಪ್ಪಿಕೊಂಡಿದೆ ಎಂದು ಅವರು ಹೇಳಿದರು.

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಮುನ್ನ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ತನ್ನ ದೌರ್ಬಲ್ಯವನ್ನು ಒಪ್ಪಿಕೊಂಡಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಮತ್ತು ಎಂಎಲ್‌ಸಿ ಸಿ.ಟಿ.ರವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿಸರ್ಕಾರವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಂತಹ ಪ್ರಬಲ ನಾಯಕರು ಹಾಗೂ 136 ಶಾಸಕರು ಇದ್ದರೂ ಯೋಗೇಶ್ವರ್‌ ಅವರಿಗೆ ಚುನಾವಣೆಗೆ ಟಿಕೆಟ್‌ ನೀಡುತ್ತಿದ್ದಾರೆ. ಇದು ಕಾಂಗ್ರೆಸ್ ತನ್ನ ದೌರ್ಬಲ್ಯವನ್ನು ಈಗಾಗಲೇ ಒಪ್ಪಿಕೊಂಡಿದೆ ಎಂದು ಅವರು ಹೇಳಿದರು. ಶಿವಕುಮಾರ್ ಅವರಿಗೆ ಪಕ್ಷದ ಅಭ್ಯರ್ಥಿ ಇದ್ದಾರೆ ಎಂದು ಇತ್ತೀಚಿನವರೆಗೂ ವಿಶ್ವಾಸದಿಂದ ಹೇಳುತ್ತಿದ್ದರು ಎಂದು ವ್ಯಂಗ್ಯವಾಡಿದರು. ಬಿಜೆಪಿಗೂ ಯೋಗೇಶ್ವರ್ ಅವರ ರಾಜಕೀಯಕ್ಕೂ ವ್ಯತ್ಯಾಸವಿದೆ ಎಂದು ರವಿ ಹೇಳಿದರು. ಅವರು ತಮ್ಮ ವೈಯಕ್ತಿಕ ಮಟ್ಟದಲ್ಲಿ ರಾಜಕೀಯ ಮಾಡುತ್ತಾರೆ. ಅವರು ರಾಜಕೀಯದಲ್ಲಿ ಯಾವಾಗಲೂ ಲಾಭದ ಬಗ್ಗೆ ಯೋಚಿಸುತ್ತಾರೆ. ಆದರೆ ನಮ್ಮದು ಸಿದ್ಧಾಂತ ಆಧಾರಿತ ಪಕ್ಷ ಎಂದರು. ಯೋಗೇಶ್ವರ್ ಅವರು ಮಹತ್ವಾಕಾಂಕ್ಷೆ ಇಟ್ಟುಕೊಂಡ ರಾಜಕಾರಣಿ. ಸುದೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ರಾಜಕಾರಣ ಮಾಡಿದವರು. ಡಿ.ಕೆ ಶಿವಕುಮಾರ್ ಮತ್ತು ಅವರ ನಡುವಿನ ಶತ್ರುತ್ವ ಇವತ್ತು ನಿನ್ನೆಯದಲ್ಲ. ಹುಲಿ ಬೋನಿಗೆ ಹೋಗಿದ್ದಾರೆ. ಒಂದೋ ಹುಲಿಯನ್ನು ಮಣಿಸಬೇಕು. ಇಲ್ಲವೇ ಹುಲಿಗೆ ಬಲಿ ಆಗಬೇಕು ಎಂದು ತಿಳಿಸಿದರು.

ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿ ಗೆಲುವಿಗಾಗಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಯೋಗೇಶ್ವರ ಅವರು ಕಾಂಗ್ರೆಸ್‌ಗೆ ಸಂಪರ್ಕದಲ್ಲಿರುವುದರಿಂದ ಕಾಂಗ್ರೆಸ್ ಸೇರುವ ನಿರೀಕ್ಷೆ ಇತ್ತು. ಆದರೆ ನಮ್ಮ ಪಕ್ಷದ ಕಾರ್ಯಕರ್ತರು ನಮ್ಮೊಂದಿಗಿದ್ದಾರೆ ಎಂದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯನ್ನು ಜೆಡಿಎಸ್ ನಿರ್ಧರಿಸಲಿದೆ. ಎನ್‌ಡಿಎ ಅಭ್ಯರ್ಥಿ ಯಾರೇ ಆಗಿರಲಿ, ನಾವು ಅವರ ಪರ ಕೆಲಸ ಮಾಡುತ್ತೇವೆ ಎಂದರು. ಯೋಗೇಶ್ವರ ಅವರು ಬಿಜೆಪಿ ತೊರೆದರೂ ಉಪಚುನಾವಣೆಯಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದರು. ಆದರೆ ಯೋಗೇಶ್ವರ ಅವರು ಬಿಜೆಪಿ ತೊರೆಯುವ ಮೂಲಕ ಕಳೆದುಕೊಂಡಿದ್ದನ್ನು ಅರಿಯಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT