ಡಿಕೆ ಸುರೇಶ್ 
ರಾಜಕೀಯ

ಕುಮಾರಸ್ವಾಮಿ ಚದುರಂಗದಾಟದಿಂದ ನಿಖಿಲ್ ಗೆ ಟಿಕೆಟ್; ನಾಮಪತ್ರ ಸಲ್ಲಿಕೆ ನಂತರ ಕಣ್ಣೀರಿನ ನಾಟಕ ಪ್ರಾರಂಭ: ಡಿ.ಕೆ ಸುರೇಶ್

ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ ಎಂದರು.

ಬೆಂಗಳೂರು: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 ವರ್ಷಗಳಿಂದ ಅವರ ದೃಷ್ಟಿಕೋನದಲ್ಲಿ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಇದರ ಮುಂದುವರೆದ ಭಾಗವಿದು. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುತ್ತಾರೆ ಎನ್ನುವುದು ಚನ್ನಪಟ್ಟಣದ ಎಲ್ಲರಿಗೂ ತಿಳಿದಿದ್ದ ಸತ್ಯ ಎಂದರು.

ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ” ಎಂದರು. ನಾಟಕ ಮಾಡಿ ನಿಖಿಲ್ ಗೆ ಟಿಕೆಟ್ ಗಳಿಸಿಕೊಂಡರೇ ಎಂದು ಕೇಳಿದಾಗ, “ಅದನ್ನು ಮಾಧ್ಯಮದವರು ಹೇಳಬೇಕು. ನಾಮಪತ್ರ ಸಲ್ಲಿಸಿದ ನಂತರ ನಾಟಕ ಪ್ರಾರಂಭವಾಗುತ್ತದೆ" ಎಂದರು. ಕಣ್ಣೀರು ಬರುತ್ತದೆಯೇ ಎಂದು ಮರುಪ್ರಶ್ನಿಸಿದಾಗ “ಬರಬಹುದೇನೋ, ಮಾಧ್ಯಮದವರು ಕಣ್ಣೀರು ಹಾಕಿ ಎಂದರೆ ಹಾಕುತ್ತಾರೆ” ಎಂದು ವ್ಯಂಗ್ಯವಾಗಿ ಉತ್ತರಿಸಿದರು.

ನಿಖಿಲ್ ಪ್ರಬಲ ಅಭ್ಯರ್ಥಿಯಾಗಬಲ್ಲರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದರಿಂದ ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ತಿಳಿಯುತ್ತದೆ. ಚುನಾವಣೆಯಲ್ಲಿ ಒಂದೊಂದು ಮತವೂ ಮುಖ್ಯ ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಯಾರು ಪ್ರಭಾವಿಗಳು ಎನ್ನುವುದಕ್ಕಿಂತ, ನಾವು ಪಕ್ಷವನ್ನು ಗೆಲ್ಲಿಸಲು ಹೋರಾಟ ಮಾಡುತ್ತೇವೆ” ಎಂದರು.

ಒಂದು ವಾರಗಳ ಕಾಲ ದೇವೇಗೌಡರು ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವುದರಿಂದ ಕಾಂಗ್ರೆಸ್ ಗೆಲುವಿಗೆ ತೊಡಕಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡರು ಇರುವುದೇ ಪ್ರಚಾರ ಮಾಡುವುದಕ್ಕೆ. ಅವರ ಮೊಮ್ಮಗನ ಪರವಾಗಿ ಪ್ರಚಾರ ಮಾಡಬೇಡಿ ಎಂದು ಹೇಳಲು ಆಗುತ್ತದೆಯೇ?. ನಾವು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೇವೆ” ಎಂದು ಹೇಳಿದರು.

ನೀವು ಅಭ್ಯರ್ಥಿಯಾಗಿಲ್ಲ ಎನ್ನುವ ಬೇಸರ ಹಾಗೂ ಪಕ್ಷದೊಳಗಿನ ಅಸಮಾಧಾನ ಸರಿಹೋಯಿತೇ ಎಂದು ಕೇಳಿದಾಗ, “ಪಕ್ಷದಲ್ಲಿ ಸಣ್ಣ ಬೇಸರವಿದೆ ಹೊರತು ಯಾವುದೇ ಅಸಮಾಧಾನವಿಲ್ಲ. ನಾನು ಮೊದಲಿನಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇ, ಮಾಧ್ಯಮದವರೇ ನನ್ನ ಹೀರೋ ಮಾಡುತ್ತಿದ್ದಾರೆ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT