ಅಜ್ಜಂಪೀರ್ ಖಾದ್ರಿ 
ರಾಜಕೀಯ

ಶಿಗ್ಗಾಂವಿಯಲ್ಲಿ 'ಕೈ'ಗೆ ಬಂಡಾಯದ ಬಿಸಿ: ನಾಮಪತ್ರ ಸಲ್ಲಿಸಿದ ಖಾದ್ರಿ, ಮನವೊಲಿಕೆಗೆ ಬಂದಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು!

ಶಿಗ್ಗಾಂವಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಅನ್ನು ನಾಮಪತ್ರ ಸಲ್ಲಿಕೆಗೆ ಇನ್ನು 13 ನಿಮಿಷ ಬಾಕಿ ಇರುವಂತೆ ಬೈಕ್ ನಲ್ಲಿ ಬಂದ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸಿದ್ದಾರೆ.

ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಬದಲಿಗೆ ಯಾಸಿರ್ ಅಹ್ಮದ್ ಖಾನ್ ಗೆ ಟಿಕೆಟ್ ಘೋಷಣೆಯಾಗಿತ್ತು. ಇದರಿಂದ ಬೇಸರಗೊಂಡಿರುವ ಅಜ್ಜಂಪೀರ್ ಖಾದ್ರಿ ಇದೀಗ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಶಿಗ್ಗಾಂವಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಅನ್ನು ನಾಮಪತ್ರ ಸಲ್ಲಿಕೆಗೆ ಇನ್ನು 13 ನಿಮಿಷ ಬಾಕಿ ಇರುವಂತೆ ಬೈಕ್ ನಲ್ಲಿ ಬಂದ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸಿದ್ದಾರೆ. ಅಜ್ಜಂಪೀರ್ ಖಾದ್ರಿಯ ಈ ನಡೆ ಇದೀಗ ಕಾಂಗ್ರೆಸ್ಸಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಅಜ್ಜಂಪೀರ್ ಖಾದ್ರಿಗೂ ಮೊದಲು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ನಾಮಪತ್ರ ಸಲ್ಲಿಸಿದ್ದರು. ಅಲ್ಲದೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸದಂತೆ ಮನವೊಲಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಅಜ್ಜಂಪೀರ್ ಖಾದ್ರಿ ಬೆಂಬಲಿಗರು ಜಮೀರ್ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಇದರಿಂದಾಗಿ ಕಾರಿನ ಗ್ಲಾಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಶಿಗ್ಗಾಂವಿ ಬಿಜೆಪಿ ಶಾಸಕರಾಗಿದ್ದ ಮಾಜಿ ಸಿಎಂ, ಪ್ರಸ್ತುತ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರ ರಾಜಿನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು. ಇನ್ನು ಬಿಜೆಪಿ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್