ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ  
ರಾಜಕೀಯ

ಚನ್ನಪಟ್ಟಣ ಉಪ ಚುನಾವಣೆ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ: ಕುಮಾರಸ್ವಾಮಿ

ಹಾಸನದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಳೆದ ಬಾರಿ ಜನರು ನನ್ನನ್ನು ಆರಿಸಿ ಕಳುಹಿಸಿದ್ದರು. ಈ ಬಾರಿ ಕೂಡ ನನ್ನ ಮಗನ ಕೈಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಹಾಸನ: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಳೆದ ಬಾರಿ ಜನರು ನನ್ನನ್ನು ಆರಿಸಿ ಕಳುಹಿಸಿದ್ದರು. ಈ ಬಾರಿ ಕೂಡ ನನ್ನ ಮಗನ ಕೈಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಉಪ ಚುನಾವಣೆ ನಂತರ ಸರ್ಕಾರದಲ್ಲಿ ಬದಲಾವಣೆಯಾಗಲಿದೆ. ಹಲವು ನಾಯಕರ ಭವಿಷ್ಯ ಕೂಡ ನಿರ್ಧಾರವಾಗಲಿದೆ ಎಂದರು, ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನವನ್ನು ಇಂದು ತಮ್ಮ ಕುಟುಂಬಸ್ಥರೊಂದಿಗೆ ಪಡೆದುಕೊಂಡರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿ ಚನ್ನಪಟ್ಟಣದಲ್ಲಿ ಪುತ್ರನಿಗೆ ಗೆಲುವಾಗಲಿ ಎಂದು ಪ್ರಾರ್ಥಿಸಿದರು.

ಈ ಚುನಾವಣೆಯಲ್ಲಿ ನಿಖಿಲ್​ಗೆ ಗೆಲುವು ಸಿಗಲೆಂದು ಪ್ರಾರ್ಥನೆ ಮಾಡಿದ್ದಾನೆ. ನನ್ನ ಮಗ ಎರಡು ಚುನಾವಣೆಯಲ್ಲಿ ಪರಾಜಯಗೊಂಡಿದ್ದಾನೆ. ಈ ಚುನಾವಣೆಯಲ್ಲಿ ನಿಖಿಲ್​ಗೆ ಗೆಲುವು ಸಿಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ಈ ಬಾರಿ ಜಿಲ್ಲಾಡಳಿತ ಭಕ್ತರಿಗೆ ಸಕಲ ರೀತಿಯ ವ್ಯವಸ್ಥೆ ಮಾಡಿದೆ. ತಾಯಿಯ ಪವಾಡವನ್ನು ಚಿಕ್ಕವರಿದ್ದಾಗನಿಂದಲೂ ಗಮನಿಸಿದ್ದೇವೆ. ಎಲ್ಲಾ ಕುಟುಂಬಕ್ಕೂ ತಾಯಿಯ ಅನುಗ್ರಹ ಸಿಗಲಿ. ನಮ್ಮ ಬಾಳಿನಲ್ಲಿ ಯಶಸ್ಸು ಕಾಣಲು ಭಗವಂತನ ಆಶೀರ್ವಾದಬೇಕು. ದುರ್ಗಾಮಾತೆ, ಚಾಮುಂಡೇಶ್ವರಿ ನಮ್ಮ ಬೇಡಿಕೆ ಅನುಗ್ರಹಿಸುತ್ತಾರೆ. ಜನರಿಗೆ ಒಳ್ಳೆ ಕೆಲಸ ಮಾಡಲು ಶಕ್ತಿ ಕೊಡಿ ಎಂದು ಕೇಳಿಕೊಂಡಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT