ಸಂಡೂರಿನಲ್ಲಿ ಭಾನುವಾರ ಶಾಸಕ ಜನಾರ್ದನರೆಡ್ಡಿ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು. Photo | Express
ರಾಜಕೀಯ

ಸಂಡೂರು ಉಪಚುನಾವಣೆ: ಮತ್ತೆ ಒಗ್ಗೂಡಿದ ಶ್ರೀರಾಮುಲು-ಜನಾರ್ಧನ ರೆಡ್ಡಿ; ಹಲವರ ಹುಬ್ಬೇರಿಸಿದ ದೋಸ್ತಿಗಳ ಜಂಟಿ ಪ್ರಚಾರ

2023ರ ಚುನಾವಣೆ ವೇಳೆ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಆಂತರಿಕ ಭಿನ್ನಾಭಿಪ್ರಾಯದಿಂದ ದೂರವಾಗಿದ್ದರು. ಬಳಿಕ ರೆಡ್ಡಿಯವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸ್ಥಾಪನೆ ಮಾಡಿದರು.

ಬಳ್ಳಾರಿ: ಸಂಡೂರು ಉಪಚುನಾವಣೆ ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇದುವರೆಗೂ ಪ್ರಚಾರದಿಂದ ದೂರವೇ ಉಳಿದಿದ್ದ ಮಾಜಿ ಸಚಿವ ಶ್ರೀರಾಮುಲು ಕೊನೆಗೂ ಸಂಡೂರು ಉಪಚುನಾವಣೆ ಪ್ರಚಾರಕ್ಕೆ ಎಂಟ್ರಿ ಕೊಟ್ಟಿದ್ದು, ಜನಾರ್ದನ ರೆಡ್ಡಿ ಜೊತೆ ಜಂಟಿ ಪ್ರಚಾರ ಆರಂಭಿಸಿದ್ದಾರೆ. ಇಬ್ಬರು ನಾಯಕರ ಜಂಟಿ ಪ್ರಚಾರ ಹಲವರ ಹುಬ್ಬೇರುವಂತೆ ಮಾಡಿದೆ.

2023ರ ಚುನಾವಣೆ ವೇಳೆ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಆಂತರಿಕ ಭಿನ್ನಾಭಿಪ್ರಾಯದಿಂದ ದೂರವಾಗಿದ್ದರು. ಬಳಿಕ ರೆಡ್ಡಿಯವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸ್ಥಾಪನೆ ಮಾಡಿದರು. ಬಳಿಕ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನ ಮಾಡಿದರು. ಈ ನಡುವೆ 14 ವರ್ಷಗಳ ನಂತರ ರೆಡ್ಡಿಯವರು ಬಳ್ಳಾರಿಗೆ ಮರಳಲು ಸುಪ್ರೀಂಕೋರ್ಟ್ ಅನುಮತಿ ನೀಡಿದ್ದು, ಇದೀಗ ರೆಡ್ಡಿಯವರು ಜಿಲ್ಲೆಗೆ ಮರಳಿದ್ದಾರೆ. ಈ ಮೂಲಕ ಜಿಲ್ಲಾ ಬಿಜೆಪಿ ಘಟಕಕ್ಕೆ ಬಹುದೊಡ್ಡ ಶಕ್ತಿ ದೊರಕಿದಂತಾಗಿದೆ.

ಆಂತರಿಕ ಸಮಸ್ಯೆಯಿಂದ ಹಿಂದೆ ಸರಿದಿದ್ದ ರಾಮುಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನವೊಲಿಸಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ರಾಮುಲು, ಅದರಂತೆ ಪ್ರಚಾರದಲ್ಲಿ ತೊಡಗಿದ್ದರು.

ಪ್ರಚಾರದ ವೇಳೆ ಮಾತನಾಡಿದ ರೆಡ್ಡಿಯವರು, ನಾನು ಮತ್ತು ಶ್ರೀರಾಮುಲು ಉತ್ತಮ ಗೆಳೆಯರು. ನಾಮಪತ್ರ ಸಲ್ಲಿಸಿದ ನಂತರ ಪ್ರಚಾರಕ್ಕೆ ಬರುವುದಾಗಿ ಕೆಲ ದಿನಗಳ ಹಿಂದೆ ಹೇಳಿದ್ದರು. ಇದರಂತೆ ನಾವಿಬ್ಬರೂ ಕಳೆದ ಎರಡು ದಿನಗಳಿಂದ ಸಂಡೂರು ತಾಲೂಕಿನ ಗ್ರಾಮಗಳಿಗೆ ಚುನಾವಣಾ ಪ್ರಚಾರಕ್ಕೆ ಭೇಟಿ ನೀಡುತ್ತಿದ್ದೇವೆ. ಉಪಚುನಾವಣೆಯಲ್ಲಿ ಗೆದ್ದು ಇತಿಹಾಸ ಸೃಷ್ಟಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಶ್ರೀರಾಮುಲು ಮಾತನಾಡಿ, ಉಪಚುನಾವಣೆ ಗೆಲ್ಲುವ ಸಮಯ ಬಂದಿದೆ. ಸ್ನೇಹಿತ ರೆಡ್ಡಿ ಜೊತೆಗೆ ಪ್ರತಿದಿನ ಪ್ರಚಾರದಲ್ಲಿ ಭಾಗವಹಿಸುತ್ತೇನೆ. ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವಂತೆ ಮಾಡುತ್ತೇವೆಂದು ತಿಳಿಸಿದರು.

ಇನ್ನು ರಾಮುಲು- ಜನಾರ್ದನ ರೆಡ್ಡಿ ಜಂಟಿ ಪ್ರಚಾರದ ನಡುವೆಯೂ ಬಿಜೆಪಿ ನಾಯಕರಿಗೆ ಒಳೇಟಿನ ಆತಂಕ ಕಾಡುತ್ತಿದೆ. ಇತ್ತ ಕಾಂಗ್ರೆಸ್‌ನಲ್ಲೂ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದರೂ ಯಾರೊಬ್ಬರೂ ಇದುವರೆಗೂ ಪ್ರಚಾರ ಕಾರ್ಯದಲ್ಲಿ ತೊಡಗಿಲ್ಲ. ಸಂಸದ ತುಕಾರಾಂ ಹಾಗೂ ಪತ್ನಿ ಅನ್ನಪೂರ್ಣ ತುಕಾರಾಂ ಮಾತ್ರ ಪ್ರಚಾರ ಮಾಡುತ್ತಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

SSLC exam 2026: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; 8.65 ಲಕ್ಷ ವಿದ್ಯಾರ್ಥಿಗಳು ನೋಂದಣಿ, All the best

'ಅವರು ರಾಜೀನಾಮೆ ನೀಡಿದ್ದು ಒಳ್ಳೆಯದೇ ಆಯ್ತು': ಉನ್ನತ ಅಧಿಕಾರಿ Joseph Kent ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೀಗಂದಿದ್ದೇಕೆ?-Video

ಸಾರ್ವಕಾಲಿಕ ಟಿ-20 ಶ್ರೇಷ್ಠ ಆಟಗಾರ: ABD ಆಯ್ಕೆ ಕೊಹ್ಲಿ, ಕ್ರಿಸ್ ಗೇಲ್ ಅಲ್ಲವೇ ಅಲ್ಲ, ಮತ್ಯಾರು ಗೊತ್ತಾ?

SCROLL FOR NEXT