ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  
ರಾಜಕೀಯ

ಶಿಗ್ಗಾಂವಿ ಉಪಚುನಾವಣೆ: ನನ್ನನ್ನೇ ಅಭ್ಯರ್ಥಿ ಎಂದು ಭಾವಿಸಿ ನನ್ನ ಮಗನಿಗೆ ಮತ ನೀಡಿ- ಸಂಸದ ಬೊಮ್ಮಾಯಿ

ಬೊಮ್ಮಾಯಿಯವರು ನಿನ್ನೆಯಷ್ಟೇ ಹೊಸೂರು, ದುಂಡಸಿ, ಜಕನಕಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಪುತ್ರ ಭರತ್ ಪರ ಪ್ರಚಾರ ನಡೆಸಿದರು.

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಜನತೆ ನನ್ನನ್ನೇ ಅಭ್ಯರ್ಥಿ ಎಂದು ಭಾವಿಸಿ ನನ್ನ ಪುತ್ರ ಭರತ್ ಬೊಮ್ಮಾಯಿಗೆ ಮತ ನೀಡಬೇಕೆಂದು ಹಾವೇರಿ-ಗದಗ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಮನವಿ ಮಾಡಿದರು.

ಬೊಮ್ಮಾಯಿಯವರು ನಿನ್ನೆಯಷ್ಟೇ ಹೊಸೂರು, ದುಂಡಸಿ, ಜಕನಕಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಪುತ್ರ ಭರತ್ ಪರ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 15 ವರ್ಷದಲ್ಲಿ ಈ ತಾಲೂಕಿನ ಅಭಿವೃದ್ಧಿಯ ಚಿತ್ರಣ ಹೇಗೆ ಬದಲಾಗಿದೆ ಎನ್ನುವುದನ್ನು ತಾವೆಲ್ಲ ನೊಡಿದ್ದೀರಿ. ಅಭಿವೃದ್ಧಿ ನಿಂತ ನೀರಲ್ಲ ಅದು ನಿರಂತರವಾಗಿ ಮುಂದುವರೆಯಬೇಕು. ಹೀಗಾಗಿ ನಾವು ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದರು.

ನಾನು ಈ ಬಾರಿ ಚುನಾವಣೆಯಲ್ಲಿ ನನ್ನ ಮಗನನ್ನು ನಿಲ್ಲಿಸಬಾರದು ಎಂದು ತೀರ್ಮಾನಿಸಿದ್ದೆ. ಹೈಕಮಾಂಡ್ ನೀವು ಇರಲೇಬೇಕು. ನಿಮ್ಮ ಮಗನಿಗೆ ಟಿಕೆಟ್ ಕೊಡುತ್ತೇವೆ. ನೀವು ಅಲ್ಲಿ ಕೆಲಸ ಮಾಡಿ ಎಂದು ಹೇಳಿದ್ದಾರೆ‌. ನಾನು ಈ ತಾಲೂಕನ್ನು ಎಂದಿಗೂ ಬಿಟ್ಟು ಹೋಗುವುದಿಲ್ಲ. ನಿಮ್ಮ ಪ್ರೀತಿಗೆ ಎಂದೂ ಬೆಲೆ ಕಟ್ಟಲಾಗುವುದಿಲ್ಲ. ಈ ಕ್ಷೇತ್ರದ ಅಭಿವೃದ್ಧಿ ಇನ್ನೂ ಆಗಬೇಕಿದೆ. ಭರತ್ ಬೊಮ್ಮಾಯಿ ಅಭಿವೃದ್ದಿ ಕಾರ್ಯ ಮುಂದುವರೆಸುತ್ತಾನೆ. ಭರತ್ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಪ್ರವಾಹ ಬಂದಾಗ ಕೇಂದ್ರ ಸರ್ಕಾರ ನೀಡಿದ್ದಕ್ಕಿಂತ ಎರಡು ಪಟ್ಟು ಬೆಳೆ ಪರಿಹಾರ ನೀಡಿದ್ದೇವೆ. ರಾಜ್ಯದಲ್ಲಿ ಸುಮಾರು ಏಳು ಸಾವಿರ ಕೋಟಿ ರೂ. ಪರಿಹಾರ ನೀಡಿದ್ದೇವೆ. ಶಿಗ್ಗಾವಿ ಕ್ಷೇತ್ರದ ರೈತರಿಗೂ ಬಂದಿದೆ. ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ನಮ್ಮ ನಾಯಕರಾದ ಯಡಿಯೂರಪ್ಪ ಅವರ ನಿರ್ಧಾರದಂತೆ ಪ್ರತಿ ಮನೆಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಶಿಗ್ಗಾವಿ ಕ್ಷೇತ್ರದಲ್ಲಿ ಸುಮಾರು 18 ಸಾವಿರ ಮನೆಗಳ ನಿರ್ಮಾಣ ಮಾಡಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT