ಸಚಿವ ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಂಡಾಯ: ಜಮೀರ್ ಕಣ್ಗಾವಲಿನಲ್ಲಿ ಅಜ್ಜಂಪೀರ್‌ ಖಾದ್ರಿ!

ಕಾಂಗ್ರೆಸ್ ಪಕ್ಷವು ಯಾಸಿರ್ ಅಹಮದ್ ಖಾನ್ ಅವರಿಗೆ ಉಪಚುನಾವಣೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡ ಖಾದ್ರಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜೀಂಪೀರ್ ಖಾದ್ರಿ ಅವರೊಂದಿಗೆ ಬುಧವಾರ ಬೆಂಗಳೂರಿನಿಂದ ಅವರ ಹುಟ್ಟೂರಾದ ಶಿಗ್ಗಾಂವ್‌ಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವ ಸಾಧ್ಯತೆಯಿದೆ.

ಕಾಂಗ್ರೆಸ್ ಪಕ್ಷವು ಯಾಸಿರ್ ಅಹಮದ್ ಖಾನ್ ಅವರಿಗೆ ಉಪಚುನಾವಣೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡ ಖಾದ್ರಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಖಾದ್ರಿ ಬೆಂಬಲಿಗರನ್ನು ಜಮೀರ್ ಸಮಾಧಾನ ಪಡಿಸಲು ಯತ್ನಿಸಿದರು. ಈ ವೇಳೆ ಶಿಗ್ಗಾಂವ್‌ನಲ್ಲಿ ಖಾದ್ರಿ ಅವರ ಕಾರನ್ನು ಧ್ವಂಸಗೊಳಿಸಲಾಗಿದೆ. ಶನಿವಾರದಂದು ಜಮೀರ್ ರಾಯಭಾರಿಯಾಗಿ ಕಾರ್ಯನಿರ್ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ಏರ್ಪಡಿಸಿದ್ದು, ಖಾದ್ರಿ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ನಾನು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇನೆ. ಕಾಂಗ್ರೆಸ್ ಗೆಲ್ಲಬೇಕು. ಹೀಗಾಗಿ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರ​ ‌ನಾಮಪತ್ರ ವಾಪಸ್ ತೆಗೆಸುವಂತೆ ಪಕ್ಷದೆ ನಾಯಕರಿಗೆ ಮನವಿ ಮಾಡಿದ್ದೇನೆ. ಮುಂದಿನದ್ದನ್ನು ಅಲ್ಲಾಹುವಿಗೆ ಬಿಟ್ಟಿದ್ದೇನೆ’ ಎಂದರು.

ನಾಮಪತ್ರ ಹಿಂಪಡೆಯಬೇಡಿ ಎಂದು ನನ್ನ ಬೆಂಬಲಿಗರು ಹೇಳುತ್ತಿದ್ದಾರೆ. ನಾಮಪತ್ರ ವಾಪಸ್‌ ಪಡೆದುಕೊಂಡರೆ ಆತ್ಮಹತ್ಯೆ ಮಾಡುವ ಬೆದರಿಕೆಯನ್ನು ಕಾರ್ಯಕರ್ತರು ಹಾಕುತ್ತಿದ್ದಾರೆ’ ಎಂದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪರ ಕೆಲಸ ಮಾಡಿದ್ದೇನೆ ಎಂಬ ತಮ್ಮ ವಿರೋಧಿಗಳ ಆರೋಪವನ್ನು ಖಾದ್ರಿ ತಳ್ಳಿಹಾಕಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿಯನ್ನು ಸೋಲಿಸಲು ನಾನು ಕಾಂಗ್ರೆಸ್ ನಿಷ್ಠಾವಂತನಾಗಿ ಕೆಲಸ ಮಾಡಿದ್ದೇನೆ ಎಂದು ಅವರು ಸಮರ್ಥಿಸಿಕೊಂಡರು. ಮೂಲಗಳ ಪ್ರಕಾರ, ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಅವರಿಂದ ತೆರವಾದ ಎಂಎಲ್‌ಸಿ ಸ್ಥಾನವನ್ನು ಖಾದ್ರಿ ಅವರಿಗೆ ಭರವಸೆ ನೀಡಲಾಯಿತು, ಅವರ ಅವಧಿ ಜುಲೈ 21, 2026 ರವರೆಗೆ ಇರುತ್ತದೆ. ಅಕ್ಟೋಬರ್ 29 ರಂದು ಎರಡು ಎಂಎಲ್‌ಸಿ ಸ್ಥಾನಗಳು ಖಾಲಿಯಾಗುತ್ತಿವೆ. ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಖಾದ್ರಿ ಅವರನ್ನು ಶೈಕ್ಷಣಿಕ ಕೋಟಾದಡಿ ಪರಿಷತ್ ಸದಸ್ಯ ಸ್ಥಾನಕ್ಕೆ ಪರಿಗಣಿಸಬಹುದು ಎಂದು ಹೇಳಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್