ಜಿ.ಟಿ. ದೇವೇಗೌಡ 
ರಾಜಕೀಯ

JDS ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿ.ಟಿ ದೇವೇಗೌಡಗೆ ಕೊಕ್; ಅನಿತಾ ಕುಮಾರಸ್ವಾಮಿ, ರೇವಣ್ಣಗೆ ಸ್ಥಾನ!

40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ.

ಬೆಂಗಳೂರು: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್‌ ನೀಡಲಾಗಿದೆ. ಜೆಡಿಎಸ್ ಸ್ಟಾರ್ ಕ್ಯಾಂಪೇನರ್​​ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್​ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಆದರೆ ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರನ್ನು ಮಾತ್ರ ನಮೂದು ಮಾಡಿಲ್ಲ.

ಇತ್ತೀಚೆಗೆ ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಜಿ.ಟಿ ದೇವೇಗೌಡರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ್ದರು. ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಜಿಟಿ ದೇವೇಗೌಡ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಸ್ಟಾರ್ ಪ್ರಚಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಮುಖ ಸ್ಟಾರ್‌ ಪ್ರಚಾರಕರು:

HD ದೇವೇಗೌಡ – ರಾಷ್ಟ್ರೀಯ ಅಧ್ಯಕ್ಷ

HD ಕುಮಾರಸ್ವಾಮಿ – ಕೇಂದ್ರ ಸಚಿವ, ರಾಜ್ಯಾಧ್ಯಕ್ಷ.

ಸುರೇಶ್ ಬಾಬು – ಶಾಸಕಾಂಗ ನಾಯಕ

ಅನಿತಾ ಕುಮಾರಸ್ವಾಮಿ – ಮಾಜಿ ಶಾಸಕಿ.

ಸಾ.ರಾ. ಮಹೇಶ್- ಮಾಜಿ ಸಚಿವ

ಪುಟ್ಟರಾಜು – ಮಾಜಿ ಸಚಿವ

ಹರೀಶ್ ಗೌಡ – ಶಾಸಕ, ಜಟಿಡಿ ಪುತ್ರ

ಮಲ್ಲೇಶ್ ಬಾಬು – ಸಂಸದ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT