ಜಿ.ಟಿ. ದೇವೇಗೌಡ 
ರಾಜಕೀಯ

JDS ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿ.ಟಿ ದೇವೇಗೌಡಗೆ ಕೊಕ್; ಅನಿತಾ ಕುಮಾರಸ್ವಾಮಿ, ರೇವಣ್ಣಗೆ ಸ್ಥಾನ!

40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ.

ಬೆಂಗಳೂರು: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್‌ ನೀಡಲಾಗಿದೆ. ಜೆಡಿಎಸ್ ಸ್ಟಾರ್ ಕ್ಯಾಂಪೇನರ್​​ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್​ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಆದರೆ ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರನ್ನು ಮಾತ್ರ ನಮೂದು ಮಾಡಿಲ್ಲ.

ಇತ್ತೀಚೆಗೆ ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಜಿ.ಟಿ ದೇವೇಗೌಡರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ್ದರು. ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಜಿಟಿ ದೇವೇಗೌಡ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಸ್ಟಾರ್ ಪ್ರಚಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಮುಖ ಸ್ಟಾರ್‌ ಪ್ರಚಾರಕರು:

HD ದೇವೇಗೌಡ – ರಾಷ್ಟ್ರೀಯ ಅಧ್ಯಕ್ಷ

HD ಕುಮಾರಸ್ವಾಮಿ – ಕೇಂದ್ರ ಸಚಿವ, ರಾಜ್ಯಾಧ್ಯಕ್ಷ.

ಸುರೇಶ್ ಬಾಬು – ಶಾಸಕಾಂಗ ನಾಯಕ

ಅನಿತಾ ಕುಮಾರಸ್ವಾಮಿ – ಮಾಜಿ ಶಾಸಕಿ.

ಸಾ.ರಾ. ಮಹೇಶ್- ಮಾಜಿ ಸಚಿವ

ಪುಟ್ಟರಾಜು – ಮಾಜಿ ಸಚಿವ

ಹರೀಶ್ ಗೌಡ – ಶಾಸಕ, ಜಟಿಡಿ ಪುತ್ರ

ಮಲ್ಲೇಶ್ ಬಾಬು – ಸಂಸದ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT