ಮಲ್ಲಿಕಾರ್ಜುನ ಖರ್ಗೆ  
ರಾಜಕೀಯ

'ಶಕ್ತಿ ಯೋಜನೆ' ಪರಿಷ್ಕರಣೆ ಹೇಳಿಕೆ: ಡಿಸಿಎಂ ಡಿಕೆ ಶಿವಕುಮಾರ್ ಗೆ ವೇದಿಕೆಯಲ್ಲೇ ಖರ್ಗೆ ತರಾಟೆ

ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಡಿಸಿಎಂ ಹೇಳಿಕೆ ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಿದೆ.

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆಯನ್ನು ಪರಿಶೀಲಿಸುತ್ತೇವೆ ಎಂದು ಹೇಳಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ತರಾಟೆಗೆ ತೆಗೆದುಕೊಂಡರು.

ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಯವರು, ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಡಿಸಿಎಂ ಹೇಳಿಕೆ ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಿದೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಏನಪ್ಪಾ… ಗ್ಯಾರಂಟಿಯ ಬಗ್ಗೆ ಏನೋ ಹೇಳಿದ್ದೀಯಲ್ಲ… ಎಂದು ಡಿಕೆಶಿ ಕಡೆಗೆ ತಿರುಗಿ ಪ್ರಶ್ನಿಸಿದರು. ಇದಕ್ಕೆ ಡಿ.ಕೆ. ಶಿವಕುಮಾರ್, ನಾನು ಏನೂ‌ ಹೇಳಿಲ್ಲ ಎಂದು ಕೈಸನ್ನೆ ಮಾಡಿದರು. ನೀನು ಪೇಪರ್ ನೋಡಿಲ್ಲಪ್ಪ, ನಾನು ನೋಡುತ್ತೇನೆ. ಪೇಪರ್​ನಲ್ಲಿ ನೀನು ಹೇಳಿದ್ದೀಯಾ ಎಂದು ಬಂದಿದೆ ಎಂದರು.

ಇವತ್ತಿನ ಪತ್ರಿಕೆಗಳಲ್ಲಿ ನಿನ್ನದೇ ಹೆಸರು ಬಂದಿದೆ. ಯಾವುದೋ ಗ್ಯಾರಂಟಿಯ ಬಗ್ಗೆ ಏನೋ ಹೇಳಿದ್ದೀಯ ಅಂತ ಹಾಸ್ಯಮಯವಾಗಿ ಪ್ರಶ್ನಿಸಿದರು.

ಒಂದಷ್ಟು ಗ್ಯಾರಂಟಿ ಕೊಟ್ಟಿದ್ದೀವಿ. ಇದನ್ನು ನೋಡಿದ ಮೇಲೆ ನಾನು ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ ಐದು ಗ್ಯಾರಂಟಿ ಕೊಟ್ಟಿದ್ದೀವಿ ಅಂತ ಹೇಳಿದ್ದೆ. ಈಗ ನೀವು(ಶಿವಕುಮಾರ್) ಒಂದು ಗ್ಯಾರಂಟಿ ಬಿಡಿ ಎಂದು ಹೇಳಿದ್ದೀರಿ ಎಂದು ಖರ್ಗೆ ವ್ಯಂಗ್ಯವಾಡಿದರು.

ಕೂಡಲೇ ಪಕ್ಕದಲ್ಲಿ ಕುಳಿತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶಿಸಿ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT