ಮಲ್ಲಿಕಾರ್ಜುನ ಖರ್ಗೆ  
ರಾಜಕೀಯ

'ಶಕ್ತಿ ಯೋಜನೆ' ಪರಿಷ್ಕರಣೆ ಹೇಳಿಕೆ: ಡಿಸಿಎಂ ಡಿಕೆ ಶಿವಕುಮಾರ್ ಗೆ ವೇದಿಕೆಯಲ್ಲೇ ಖರ್ಗೆ ತರಾಟೆ

ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಡಿಸಿಎಂ ಹೇಳಿಕೆ ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಿದೆ.

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆಯನ್ನು ಪರಿಶೀಲಿಸುತ್ತೇವೆ ಎಂದು ಹೇಳಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ತರಾಟೆಗೆ ತೆಗೆದುಕೊಂಡರು.

ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಯವರು, ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಡಿಸಿಎಂ ಹೇಳಿಕೆ ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಿದೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಏನಪ್ಪಾ… ಗ್ಯಾರಂಟಿಯ ಬಗ್ಗೆ ಏನೋ ಹೇಳಿದ್ದೀಯಲ್ಲ… ಎಂದು ಡಿಕೆಶಿ ಕಡೆಗೆ ತಿರುಗಿ ಪ್ರಶ್ನಿಸಿದರು. ಇದಕ್ಕೆ ಡಿ.ಕೆ. ಶಿವಕುಮಾರ್, ನಾನು ಏನೂ‌ ಹೇಳಿಲ್ಲ ಎಂದು ಕೈಸನ್ನೆ ಮಾಡಿದರು. ನೀನು ಪೇಪರ್ ನೋಡಿಲ್ಲಪ್ಪ, ನಾನು ನೋಡುತ್ತೇನೆ. ಪೇಪರ್​ನಲ್ಲಿ ನೀನು ಹೇಳಿದ್ದೀಯಾ ಎಂದು ಬಂದಿದೆ ಎಂದರು.

ಇವತ್ತಿನ ಪತ್ರಿಕೆಗಳಲ್ಲಿ ನಿನ್ನದೇ ಹೆಸರು ಬಂದಿದೆ. ಯಾವುದೋ ಗ್ಯಾರಂಟಿಯ ಬಗ್ಗೆ ಏನೋ ಹೇಳಿದ್ದೀಯ ಅಂತ ಹಾಸ್ಯಮಯವಾಗಿ ಪ್ರಶ್ನಿಸಿದರು.

ಒಂದಷ್ಟು ಗ್ಯಾರಂಟಿ ಕೊಟ್ಟಿದ್ದೀವಿ. ಇದನ್ನು ನೋಡಿದ ಮೇಲೆ ನಾನು ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ ಐದು ಗ್ಯಾರಂಟಿ ಕೊಟ್ಟಿದ್ದೀವಿ ಅಂತ ಹೇಳಿದ್ದೆ. ಈಗ ನೀವು(ಶಿವಕುಮಾರ್) ಒಂದು ಗ್ಯಾರಂಟಿ ಬಿಡಿ ಎಂದು ಹೇಳಿದ್ದೀರಿ ಎಂದು ಖರ್ಗೆ ವ್ಯಂಗ್ಯವಾಡಿದರು.

ಕೂಡಲೇ ಪಕ್ಕದಲ್ಲಿ ಕುಳಿತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶಿಸಿ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ನಿಂದ ಇರಾನ್ ಗುಪ್ತಚರ ಇಲಾಖೆ ಮುಖ್ಯಸ್ಥರ ಹತ್ಯೆ?; ಇದರಿಂದೆಲ್ಲಾ ನಾಯಕತ್ವಕ್ಕೆ ಮಾರಕ ಹೊಡೆತ ಬೀಳಲ್ಲ- ಇರಾನ್

ಉಪ ಚುನಾವಣೆ 2026: ಸಿದ್ದರಾಮಯ್ಯ ಸಂಧಾನ ಯಶಸ್ವಿ, ಬಾಗಲಕೋಟೆ ಕಾಂಗ್ರೆಸ್ ಕದನಕ್ಕೆ ಕೊನೆಗೂ ತೆರೆ!

'ನನ್ನ ಘನತೆಗೆ ಧಕ್ಕೆ, ಪ್ರಚಾರಕ್ಕೆ ಬರಲ್ಲ..' 'ನಿರ್ದೇಶಕ ಪ್ರೇಮ್ ಗೆ ಮೊದಲೇ ಎಚ್ಚರಿಕೆ ನೀಡಿದ್ದೆ..': ಬಾಲಿವುಡ್ ನಟಿ Nora Fatehi ಶಾಕಿಂಗ್ ಹೇಳಿಕೆ

'Rafale ಫೈಟರ್ ಜೆಟ್, ಕ್ಷಿಪಣಿಗಳೂ ಕೂಡ ನಿಷ್ಪ್ರಯೋಜಕ... ': ಲೆಫ್ಟಿನೆಂಟ್ ಜನರಲ್ Raj Shukla ಅಚ್ಚರಿ ಹೇಳಿಕೆ

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!

SCROLL FOR NEXT