ಆರ್ ವಿ ದೇಶಪಾಂಡೆ  
ರಾಜಕೀಯ

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ, ಗ್ಯಾರಂಟಿಯಿಂದ ಆರ್ಥಿಕ ಹೊರೆ: ಆರ್ ವಿ ದೇಶಪಾಂಡೆ

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಡಾ ವಿಚಾರದಲ್ಲಿ ತಪ್ಪೇ ಮಾಡಿಲ್ಲ ಎಂದ ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಕಾಂಗ್ರೆಸ್ ನಲ್ಲಿಯೇ ಅನೇಕ ನಾಯಕರು ಹೇಳುತ್ತಿದ್ದರೂ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವವರಿಗೇನು ಕಡಿಮೆಯಿಲ್ಲ. ಹಲವು ಸಚಿವರು, ಹಿರಿಯ ಶಾಸಕರು ತಮ್ಮ ಆಸೆಯನ್ನು ಆಗೊಮ್ಮೆ, ಈಗೊಮ್ಮೆ ವ್ಯಕ್ತಪಡಿಸುತ್ತಿರುತ್ತಾರೆ. ಅವರಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಆರ್ ವಿ ದೇಶಪಾಂಡೆ ಕೂಡ ಒಬ್ಬರು.

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಡಾ ವಿಚಾರದಲ್ಲಿ ತಪ್ಪೇ ಮಾಡಿಲ್ಲ ಎಂದ ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಫೋನ್ ಟ್ಯಾಪಿಂಗ್‌ ಆರೋಪ ಬಂದಾತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ದಿನ ಫೋನ್ ಟ್ಯಾಪ್ ನಡೀತಾ ಇದೆ, ಆದರೆ ಮೌಲ್ಯಾಧಾರಿತ ರಾಜಕಾರಣ ಈಗ ನಡೆಯುತ್ತಿಲ್ಲ. ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದೇ ರೀತಿ ನಡೆದುಕೊಳ್ಳುತ್ತಿದ್ದರು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು. ಅಷ್ಟಕ್ಕೇ ಸುಮ್ಮನಾಗದೆ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ತಾನು ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಹೇಳಿದರು.

ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರು ಮುಖ್ಯಮಂತ್ರಿ ಆಗಬೇಕು ಅಷ್ಟೆ. ಆದರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಹಾಗಾದರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಮಹತ್ವಕಾಂಕ್ಷೆ ಇರಬೇಕು.

ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಕೂಡ, ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಸದ್ಯ ಸಿಎಂ ಬದಲಾವಣೆ ಕುರಿತು ನ‌ನಗೆ ಗೊತ್ತಿಲ್ಲದೆ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ್‌ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೆ ಎಂದರು.

ಗ್ಯಾರಂಟಿಯಿಂದ ಆರ್ಥಿಕ ಹೊರೆ: ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬಿದ್ದಿರುವುದು ನಿಜ. ಗ್ಯಾರಂಟಿ ಯೋಜನೆಗೆ 50 ರಿಂದ 60ಸಾವಿರ ಕೋಟಿ ರೂಪಾಯಿ ಬೇಕಾಗಿದೆ. ತೊಂದರೆಯಾಗಿರುವುದನ್ನು ಸರಿದೂಗಿಸುತ್ತಿದ್ದಾರೆ. ಆದರೆ ಬೆಲೆ ಏರಿಕೆಗೆ ಕಾರಣ ಇದಲ್ಲ. ದೇಶದಲ್ಲೇ ಬೆಲೆ ಏರಿಕೆ ಆಗಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಒಪ್ಪಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT