ಆರ್ ಅಶೋಕ್  
ರಾಜಕೀಯ

ರಾಜಭವನ ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧ ಕಾಂಗ್ರೆಸ್‌ ಕಚೇರಿಯಾಗಿದೆಯೇ: ಅಶೋಕ್ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ?

ಬೆಂಗಳೂರು : ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್‌.ಅಶೋಕ್ ಟೀಕಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ, ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎಂದು ನಾವು ಹೇಳುತ್ತೇವೆ ಎಂದರು.

ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್‌ ಕಚೇರಿಯಾಗಿತ್ತೇ? ಕಾಂಗ್ರೆಸ್‌ ನಾಯಕರು ಕಿವಿಯ ಮೇಲೆ ಹೂ ಇಡುವುದನ್ನು ಬಿಟ್ಟು, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಹಿಂದೆ ನಿಂತಿರುವ ಬಂಡೆಯನ್ನು ತಳ್ಳುವ ಶಕ್ತಿ ನಮಗಿಲ್ಲ. 136 ಶಾಸಕರಿದ್ದಾರೆ ಎಂದು ಅಹಂಕಾರದಿಂದ ಮೆರೆಯುವ ಕಾಂಗ್ರೆಸ್‌ ನಾಯಕರು, ಈ ಸರ್ಕಾರವನ್ನು ಬಿಜೆಪಿ ಬೀಳಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. 136 ಶಾಸಕರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲ ಎಂಬುದು ಈ ಮೂಲಕ ಕಂಡುಬಂದಿದೆ ಎಂದರು.

ಮುಡಾ ಪ್ರಕರಣದಲ್ಲಿ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ವಾಸ್ತವಾಂಶ ಪರಿಶೀಲಿಸಿದ ಬಳಿಕ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ್ದು, ಕಾಂಗ್ರೆಸ್ ನಾಯಕರು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಅನುಮತಿ ನೀಡಿದಂತೆ ಮಾತನಾಡುತ್ತಿದ್ದಾರೆ ಎಂದು ಅಶೋಕ ಹೇಳಿದರು. ಬಿಎಸ್ ಯಡಿಯೂರಪ್ಪ ಅವರನ್ನೂ ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಲಾಗಿದೆ. ಆ ಸಮಯದಲ್ಲಿ ಕೇಂದ್ರದಲ್ಲಿ ಯಾರು ಅಧಿಕಾರದಲ್ಲಿದ್ದರು? ಆಗ ಕಾಂಗ್ರೆಸ್ ರಾಜಭವನವನ್ನು ತಮ್ಮ ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಿತ್ತು ಎಂದು ಪ್ರಶ್ನಿಸಿದರು. ರಾಜಭವನವನ್ನು ಬಿಜೆಪಿ ಕಚೇರಿ ಎಂದು ಕರೆದರೆ, ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎಂದು ಕರೆಯುತ್ತಾರೆ ಎಂದು ಅಶೋಕ ಹೇಳಿದರು.

ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಟಿಕೆಟ್‌ಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ನಿರ್ಧರಿಸುತ್ತಾರೆ ಎಂದು ಅಶೋಕ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT