ಬೆಂಗಳೂರು: ರಾಜ್ಯಪಾಲರು ಮತ್ತು ಪ್ರತಿಪಕ್ಷಗಳ ಆಡಳಿತದ ರಾಜ್ಯ ಸರ್ಕಾರಗಳ ನಡುವಿನ ಘರ್ಷಣೆ ಹೆಚ್ಚುತ್ತಿದ್ದು, ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಸೋಮವಾರ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿಲ್ಲದ ವ್ಯಕ್ತಿಯನ್ನು ಒಮ್ಮತದಿಂದ ನೇಮಿಸಬೇಕು ಎಂದು ಹೇಳಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರ ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಸುಧಾರಣೆ ತರಬೇಕು ಎಂದು ಕರೆ ನೀಡಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ನಾಲ್ಕು ಬಾರಿ ಸಂಸದರಾಗಿರುವ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸಿತ್ತಿದೆ". ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಈ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
"ಗೋಪಾಲಕೃಷ್ಣ ಗಾಂಧಿಯಂತಹವರು ಇಂತಹ ಕೆಲಸವನ್ನು ಮಾಡುತ್ತಾರೆಯೇ? ಉಪರಾಷ್ಟ್ರಪತಿ ಸ್ಥಾನಕ್ಕೆ ನಮ್ಮ ಪಕ್ಷದಿಂದ ಅವರ ಹೆಸರನ್ನು ಸೂಚಿಸಲ್ಪಟ್ಟಿದ್ದರೂ ನಾನು ಅವರ ಹೆಸರನ್ನು ತೆಗೆದುಕೊಳ್ಳುತ್ತಿದ್ದೇನೆ. ಯಾವುದೇ ತಪ್ಪುಗಳನ್ನು ಮಾಡದ ಅಂತಹ ಜನರು ನೇಮಿಸಬೇಕು ಅಥವಾ ರಾಜ್ಯಪಾಲರ ಹುದ್ದೆಯನ್ನೇ ರದ್ದುಪಡಿಸಬೇಕು’’ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ.