ಸುಮಲತಾ ಅಂಬರೀಶ್ 
ರಾಜಕೀಯ

ಮಂಡ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಲು ಮಾಜಿ ಸಂಸದೆ ಸುಮಲತಾ ಅಂಬರೀಶ್ ಮುಂದು!

ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕೆಂದಿದ್ದೇನೆ, ಪಕ್ಷ ಕಟ್ಟಲು ಬಲಿಷ್ಠ ನಾಯಕರ ಅವಶ್ಯಕತೆ ಇದೆ. ಹಲವು ವರ್ಷಗಳಿಂದ ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಪಕ್ಷ ಸಿ ವರ್ಗದಲ್ಲಿ ಇರಿಸಿದೆ.

ಮಂಡ್ಯ: ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕೆಂದಿದ್ದೇನೆ, ಪಕ್ಷ ಕಟ್ಟಲು ಬಲಿಷ್ಠ ನಾಯಕರ ಅವಶ್ಯಕತೆ ಇದೆ. ಹಲವು ವರ್ಷಗಳಿಂದ ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಪಕ್ಷ ಸಿ ವರ್ಗದಲ್ಲಿ ಇರಿಸಿದೆ. ಇದು ಈ ಕ್ಷೇತ್ರಗಳಲ್ಲಿ ಪಕ್ಷ ದುರ್ಬಲವಾಗಿರುವುದು ಮತ್ತು ಹೆಚ್ಚಿನ ಸಮಯಗಳಲ್ಲಿ ಮೂರನೇ ಸ್ಥಾನದಲ್ಲಿದೆ ಎಂಬುದನ್ನು ಸೂಚಿಸುತ್ತದೆ ಎಂದಿದ್ದಾರೆ.

ಕಳೆದ ಲೋಕಸಭೆ ಅವಧಿಯಲ್ಲಿ ಸ್ವತಂತ್ರ ಸಂಸದೆಯಾಗಿ ಸೇವೆ ಸಲ್ಲಿಸಿದ್ದ ಸುಮಲತಾ ಈ ವರ್ಷದ ಏಪ್ರಿಲ್‌ನಲ್ಲಿ ಬಿಜೆಪಿ ಸೇರಿದ್ದರು. ಆದರೆ ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಿರಲಿಲ್ಲ. ಈ ಹಿನ್ನಡೆಯ ಹೊರತಾಗಿಯೂ, ಅವರು ಆಶಾವಾದಿಯಾಗಿ ಉಳಿದಿದ್ದು, ಬಿಜೆಪಿಯಲ್ಲಿ ತನ್ನ ಹೊಸ ಪಾತ್ರಕ್ಕೆ ಸಮರ್ಪಿಸಿಕೊಂಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸಾಂಪ್ರದಾಯಿಕವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರಾಬಲ್ಯ ಹೊಂದಿರುವ ಮಂಡ್ಯ ರಾಜಕೀಯದಲ್ಲಿ ಬಿಜೆಪಿಯೊಂದಿಗಿನ ಅವರ ಹೊಂದಾಣಿಕೆ ನಿರ್ಧಾರ ಮಹತ್ವದ್ದಾಗಿದೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ನಿರಾಯಾಸವಾಗಿ ಗೆಲುವು ಸಾಧಿಸಿದ್ದರು.

ಸುಮಲತಾ ಅವರು ದಿವಂಗತ ನಟ ಮತ್ತು ರಾಜಕಾರಣಿ ಅಂಬರೀಶ್ ಅವರ ಪತ್ನಿ. ಪಕ್ಷದ ಸಾಂಸ್ಥಿಕ ರಚನೆಯನ್ನು ಬಲಪಡಿಸಲು ತನ್ನ ಸ್ಥಳೀಯ ಬೆಂಬಲವನ್ನು ಬಳಸಿಕೊಳ್ಳುವ ಗುರಿಯನ್ನು ಅವರು ಹೊಂದಿದ್ದಾರೆ. ಈ ಪ್ರದೇಶದಲ್ಲಿ ಪಕ್ಷದ ದೌರ್ಬಲ್ಯಗಳನ್ನು ಪರಿಹರಿಸಲು ಸ್ಥಳೀಯ ಬಿಜೆಪಿ ಘಟಕಗಳಲ್ಲಿ ಪ್ರಬಲ ನಾಯಕರನ್ನು ಬೆಳೆಸಲು ಅವರು ಒತ್ತು ನೀಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT