ರಾಜಕೀಯ

ಡಿನೋಟಿಫಿಕೇಷನ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದು ಕಾಂಗ್ರೆಸ್ ಟೂಲ್ ಕಿಟ್: ಹೆಚ್ ಡಿ ಕುಮಾರಸ್ವಾಮಿ

ಜಮೀನು ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿರುದ್ಧ ತನಿಖೆಯನ್ನು ತ್ವರಿತಗೊಳಿಸುವಂತೆ ಕಾಂಗ್ರೆಸ್ ನಿನ್ನೆ ಲೋಕಾಯುಕ್ತಕ್ಕೆ ಮನವಿ ಮಾಡಿತ್ತು.

ಮೈಸೂರು: ಬೆಂಗಳೂರಿನ ಭೂ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದು, ಇದರಲ್ಲಿ ನನ್ನ ಪಾತ್ರವಿಲ್ಲ ಎಂದಿದ್ದಾರೆ.

ಜಮೀನು ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ವಿರುದ್ಧ ತನಿಖೆಯನ್ನು ತ್ವರಿತಗೊಳಿಸುವಂತೆ ಕಾಂಗ್ರೆಸ್ ನಿನ್ನೆ ಲೋಕಾಯುಕ್ತಕ್ಕೆ ಮನವಿ ಮಾಡಿತ್ತು.

ಬೆಂಗಳೂರು ಉತ್ತರ ಕಸಬಾ ಹೋಬಳಿಯ ಗಂಗೇನಹಳ್ಳಿಯಲ್ಲಿ 1.11 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿರುವ ಬಗ್ಗೆ ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಜಂಟಿ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ನಾನು ಓಡಿಹೋಗುತ್ತಿಲ್ಲ, ಬೇರೆಯವರ ಹೆಸರಿನಲ್ಲಿ ರಕ್ಷಣೆಯನ್ನು ತೆಗೆದುಕೊಳ್ಳಬೇಕಾಗಿಲ್ಲ, ನನಗೆ ಸಂಬಂಧಿಸಿದ ವಿಷಯಗಳಲ್ಲಿ, ಅದು ನನ್ನ ಪತ್ನಿಯ ತಾಯಿಗೆ ಸಂಬಂಧಿಸಿದ ಆಸ್ತಿಯಾಗಿದೆ. ನಾನು ಡಿನೋಟಿಫಿಕೇಶನ್ ಮಾಡಿಲ್ಲ ಎಂದರು.

ಕೃಷ್ಣ ಭೈರೇಗೌಡ ಯಾರನ್ನೋ ಮೆಚ್ಚಿಸಲು ಮಾತನಾಡುತ್ತಿದ್ದಾರೆ. ಅವರೇನು ಸತ್ಯ ಹರಿಶ್ಚಂದ್ರನಾ? ಕಂದಾಯ ಇಲಾಖೆಯಲ್ಲಿ ಏನೇನು ಮಾಡಿದ್ದೀಯಾ ಗೊತ್ತಿದೆ. ನೀವು ಏನೇ ಮಾಡಿದರೂ ನನ್ನದು ಏನು ಸಿಗುವುದಿಲ್ಲ ಎಂದು ಏಕವಚನದಲ್ಲಿಯೇ ಸವಾಲು ಹಾಕಿದರು.

ಇದು ಟೂಲ್ ಕಿಟ್ ಸ್ಕ್ರಿಪ್ಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿರುವ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರು ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಈ ಪತ್ರಿಕಾಗೋಷ್ಠಿ ಕಾಂಗ್ರೆಸ್ ನ ಟೂಲ್ ಕಿಟ್. ನಿನ್ನೆ ಯಾರೋ ಅವರಿಗೆ ಸರಿಯಾಗಿ ಸ್ಕ್ರಿಪ್ಟ್ ಕೂಡ ಬರೆದುಕೊಟ್ಟಿಲ್ಲ. ಅದರಲ್ಲೇ ಅವರು ಸಿಕ್ಕಿ ಬೀಳುತ್ತಾರೆಂದು ಕುಮಾರಸ್ಲಾಮಿ ಕುಟುಕಿದರು.

ನಾನು ಎಲ್ಲಿಗೂ ಕದ್ದು ಓಡಿ ಹೋಗೋದಿಲ್ಲ. ನನ್ನ ರಕ್ಷಣೆ ಮಾಡಿ ಎಂದು ಯಾರ ಮುಂದೆಯೂ ಗೋಗರೆಯುವುದಿಲ್ಲ. ಗೋಗರೆಯುವ ಕೆಲಸವನ್ನು ನಾನು ಮಾಡಿಲ್ಲ. ನಾನು ಯಾವುದೇ ಅಂತಹ ಕೆಟ್ಟ ಕೆಲಸಗಳನ್ನು ಮಾಡಿಲ್ಲ. ಡಿನೋಟಿಫಿಕೇಷನ್ ಆಗಿದೆ, ಅದನ್ನು ನಾನು ಮಾಡಿದ್ದೇನಾ? ಆ ಜಮೀನು ತೆಗೆದುಕೊಂಡಿರುವುದು ನನ್ನ ಪತ್ನಿಯ ಅತ್ತೆ. ನನಗೂ ಅವರಿಗೆ ಸಂಬಂಧ ಇಲ್ಲ ಎಂದು ಸಿಎಂ ರೀತಿ ಹೇಳುವುದಿಲ್ಲ ಎಂದರು.ಈ ಜಮೀನಿನ ಮೂಲ ಮಾಲೀಕರು 21 ವಾರಸುದಾರರನ್ನು ಹೊಂದಿದ್ದು, ಅವರು ಕುಮಾರಸ್ವಾಮಿ ಅವರ ಅತ್ತೆಗೆ ಸಾಮಾನ್ಯ ವಕೀಲರ ಅಧಿಕಾರವನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರ ಯಾವುದಾದರೊಂದು ಪ್ರಕರಣದಲ್ಲಿ ನನ್ನನ್ನು ಸಿಕ್ಕಿಸಿಹಾಕಲು ಪ್ರಯತ್ನಿಸುತ್ತಿದೆ. ನಾನು ಪ್ರಶ್ನಾರ್ಹ ಭೂಮಿಯನ್ನು ಡಿನೋಟಿಫೈ ಮಾಡಿಲ್ಲ ಅಥವಾ ಡಿನೋಟಿಫೈ ಮಾಡಲು ಅನುಮೋದನೆ ನೀಡಿಲ್ಲ. ನಾನು ಓಡಿಹೋಗುತ್ತಿಲ್ಲ. ಜಮೀನು ನನ್ನ ಅತ್ತೆಗೆ ಸೇರಿದ್ದು. ನಾನು ಯಾವುದೇ ಭೂಮಿಯನ್ನು ಡಿನೋಟಿಫೈ ಮಾಡಿಲ್ಲ. ನನಗೇನಾದರೂ ಆಸಕ್ತಿ ಇದ್ದಿದ್ದರೆ, ನಾನು ಸಿಎಂ ಆಗಿದ್ದ ಅವಧಿಯಲ್ಲಿ ಅದನ್ನು ಅನುಮೋದಿಸಿ ಡಿನೋಟಿಫೈ ಮಾಡಿಸಿಕೊಳ್ಳುತ್ತಿದ್ದೆ. ಮನವಿಯನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದಾಗ ನಾನು ಹೇಗೆ ಜವಾಬ್ದಾರನಾಗಿರುತ್ತೇನೆ ಎಂದು ಕೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ನಾನು 14 ನಿವೇಶನಗಳನ್ನು ಪಡೆಯಲು ನಕಲಿ ದಾಖಲೆ ಸೃಷ್ಟಿಸಿಲ್ಲ ಎಂದು ತಿರುಗೇಟು ಕೊಟ್ಟರು.

ಕೈಗಾರಿಕೆಗಳ ಪುನರುಜ್ಜೀವನ: ಸಾರ್ವಜನಿಕ ವಲಯದ ಉದ್ದಿಮೆಗಳ ಘಟಕಗಳನ್ನು ಪುನಶ್ಚೇತನಗೊಳಿಸಲು ಮಾರ್ಗಸೂಚಿ ಸಿದ್ಧಪಡಿಸಿದ್ದೇನೆ. ಕೇಂದ್ರ ಸಚಿವ ಸಂಪುಟವು ಘಟಕ ಮುಚ್ಚುವ ನಿರ್ಧಾರ ಕೈಗೊಂಡಿದ್ದರೂ ಎಚ್‌ಎಂಟಿ ಸೇರಿದಂತೆ ಕೈಗಾರಿಕೆಗಳನ್ನು ಪುನಶ್ಚೇತನಗೊಳಿಸುವ ಸಾಧ್ಯತೆಯನ್ನು ತಮ್ಮ ಸಚಿವಾಲಯ ಪರಿಶೀಲಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿ ಉದ್ಯೋಗ ಸೃಷ್ಟಿಸಲು ಸಿಮೆಂಟ್ ಕಾರ್ಖಾನೆಗಳನ್ನು ಪುನರುಜ್ಜೀವನಗೊಳಿಸುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು. ಬೆಂಗಳೂರಿನಲ್ಲಿ ಎಚ್‌ಎಂಟಿಗೆ ಸೇರಿದ 1,000 ಎಕರೆಗೂ ಹೆಚ್ಚು ಭೂಮಿ ಒತ್ತುವರಿಯಾಗಿರುವ ವರದಿಗಳಿರುವುದರಿಂದ ತಮ್ಮ ಸಚಿವಾಲಯವು ಪಿಎಸ್‌ಯು ಜಮೀನುಗಳನ್ನು ಸರ್ವೆ ಮಾಡಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!